ಧಾರವಾಡ prajakiran.com ಫೆ.21: ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ನಿತೀಶ ಪಾಟೀಲ ಅವರ ನಿವಾಸದ ಆವರಣದಲ್ಲಿನ ಶ್ರೀಗಂಧದ ಮರ ಕಳ್ಳತನವಾಗಿದೆ.
ಮಾಹಿತಿ ಅರಿತು ಸೋಮವಾರ ಬೆಳಿಗ್ಗೆ ಸ್ಥಳ ಪರಿಶೀಲನೆ ಮಾಡಿ, ಪ್ರಕರಣ ದಾಖಲಿಸಲಾಗಿದೆ ಎಂದು ಧಾರವಾಡ ವಲಯ ಅರಣ್ಯ ಅಧಿಕಾರಿ ಆರ.ಎಸ್.ಉಪ್ಪಾರ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ನಿನ್ನೆ (ಫೆ.20) ತಡರಾತ್ರಿ ಜಿಲ್ಲಾಧಿಕಾರಿಗಳ ನಿವಾಸದ ಆವರಣದಲ್ಲಿದ್ದ ಶ್ರೀಗಂಧದ ಮರ ಕಳ್ಳತನವಾಗಿದೆ.
ಬೆಳಿಗ್ಗೆ ಮಾಹಿತಿ ಬಂದ ತಕ್ಷಣ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮರ ಕಡಿದ ಸ್ಥಳ ಪರಿಶೀಲನೆ ಮಾಡಿದ್ದಾರೆ.
ಈಗಾಗಲೇ ಅರಣ್ಯ ಇಲಾಖೆಯಿಂದ ಎಫ್.ಐ.ಆರ್. ದಾಖಲಿಸಲಾಗಿದೆ. ಮತ್ತು ತನಿಖೆ ಆರಂಭಿಸಲಾಗಿದ್ದು, ಶೀಘ್ರದಲ್ಲೇ ಮರ ಕಳ್ಳರನ್ನು ಬಂಧಿಸಲಾಗುವುದು ಎಂದು ಧಾರವಾಡ ವಲಯ ಅರಣ್ಯ ಅಧಿಕಾರಿ ಆರ್.ಎಸ್.ಉಪ್ಪಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.