ರಾಜ್ಯ

ಧಾರವಾಡ : ಶಾಲೆ-ಕಾಲೇಜುಗಳ ಪ್ರವೇಶಕ್ಕೆ ಮುನ್ನ ಹಿಜಬ್ ತೆಗೆದಿಡಲು ಸೂಚನೆ

ಧಾರವಾಡ prajakiran.com ಫೆ.17:

ಸಮವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಿರುವ ಶಾಲೆ,ಕಾಲೇಜುಗಳಲ್ಲಿ ಗೇಟಿನ ಹೊರಗೆ ವಿದ್ಯಾರ್ಥಿನಿಯರನ್ನು ತಡೆದು ಹಿಜಬ್ ತೆಗೆಸಬಾರದು.

ಆದರೆ ಆವರಣ ಪ್ರವೇಶಿಸಿದ ಬಳಿಕ ತರಗತಿಗಳಿಗೆ ತೆರಳುವ ಮುನ್ನ ಹಿಜಬ್ ತೆಗೆದು ವರ್ಗಕೋಣೆಗಳನ್ನು ಪ್ರವೇಶಿಸಲು ಅವಕಾಶವಿದೆ.

ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳ ಮುಖ್ಯೋಪಾಧ್ಯಾಯರು,ಪ್ರಾಚಾರ್ಯರು ಈ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಿ,ವಿದ್ಯಾರ್ಥಿಗಳ ಪಾಠ,ಪ್ರವಚನಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಸೂಚನೆ ನೀಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಶಾಲೆ ಕಾಲೇಜುಗಳ ಆವರಣಕ್ಕೆ ವಿದ್ಯಾರ್ಥಿಗಳು, ಶಿಕ್ಷಕರು,ಉಪನ್ಯಾಸಕರು ಹಾಗೂ ಸಿಬ್ಬಂದಿ ಹೊರತುಪಡಿಸಿ ಇತರೆ ವ್ಯಕ್ತಿಗಳಿಗೆ ಪ್ರವೇಶ ನೀಡಬಾರದು.

ಪಾಲಕರು ಊಟ,ಉಪಹಾರ ತಂದು ಕೊಡಲು ಬಂದರೆ ಗೇಟಿನ ಬಳಿಯೇ ಸ್ವೀಕರಿಸುವ ವ್ಯವಸ್ಥೆ ಮಾಡಬೇಕು.

ಯಾವುದೇ ಕಾರಣಕ್ಕೂ ಅನ್ಯವ್ಯಕ್ತಿಗಳಿಗೆ ಶಾಲೆ,ಕಾಲೇಜು ಆವರಣಕ್ಕೆ ಪ್ರವೇಶಿಸಲು ಅವಕಾಶ ನೀಡಬಾರದು.

ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ-ಕಾಲೇಜುಗಳ ಮುಖ್ಯೋಪಾಧ್ಯಾಯರು,ಪ್ರಾಚಾರ್ಯರು ಈ ನಿರ್ದೇಶನವನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *