ಬೆಂಗಳೂರು prajakiran.com : ರಾಜ್ಯದ ಬಿಜೆಪಿ ಸರಕಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರನ್ನು ಬೆಂಗಳೂರಿನ ಸರ್ವ ಶಿಕ್ಷಣಅಭಿಯಾನ ರಾಜ್ಯ ಯೋಜನಾ ನಿರ್ದೇಶಕರಾಗಿ ವರ್ಗಾವಣೆ ಮಾಡಿದೆ.
ಅವರ ಸ್ಥಳಕ್ಕೆ ವಾಣಿಜ್ಯ ತೆರಿಗೆ ಹೆಚ್ಚುವರಿ ಆಯುಕ್ತರಾಗಿದ್ದ ನಿತೀಶ್ ಪಾಟೀಲ್ ಅವರನ್ನು ನಿಯೋಜಿಸಿದೆ.
ಅದೇ ರೀತಿ ಗದಗ ಜಿಲ್ಲಾಧಿಕಾರಿಯಾಗಿದ್ದ ಎಂ.ಜಿ. ಹಿರೇಮಠಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ನಿಯೋಜಿಸಿದೆ. ಅವರಿಂದ ತೆರವಾದ ಹುದ್ದೆ ಸುಂದರೇಶ ಬಾಬು ಎಂ. ಅವರನ್ನು ಗದಗ ಜಿಲ್ಲಾಧಿಯಾರಿ ವರ್ಗಾವಣೆ ಮಾಡಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕರಾಗಿದ್ದ ಸುರಳಕರ್ ವಿಕಾಸ ಕಿಶೋರ್ ಅವರನ್ನು ಕೊಪ್ಪಳ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿದೆ.
ಕೊಪ್ಪಳ ಜಿಲ್ಲಾಧಿಕಾರಿಯಾಗಿದ್ದ ಸುನೀಲ್ ಕುಮಾರ್ ಅವರನ್ನು ಬೆಂಗಳೂರಿನ ಬಿಬಿಎಂಪಿ ಆರ್ಥಿಕ ಹಾಗೂ ತಂತ್ರಜ್ಞಾನ ವಿಭಾಗದ ವಿಶೇಷ ಆಯುಕ್ತರಾಗಿ ನಿಯೋಜಿಸಲಾಗಿದೆ.
ಕರೋನಾ ಸಂದರ್ಭದಲ್ಲಿ ಧಾರವಾಡ ಡಿಸಿ ವರ್ಗಾವಣೆ ಆದೇಶ ಹೊರಡಿಸಿದ ರಾಜ್ಯದ ಬಿಜೆಪಿ ಸರ್ಕಾರದ ಕ್ರಮಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರಅಸಮಾಧಾನ ವ್ಯಕ್ತವಾಗಿದೆ.
ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ವರ್ಗಾವಣೆ ಮಾಡಿರುವುದಕ್ಕೆ ಹಲವುಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅನೇಕರು ಸ್ವಾಗತಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಸರಕಾರ ತಪ್ಪು ಹೆಜ್ಜೆ ಇಟ್ಟಿದೆ ಎಂದು ಕೆಲವರು ಆತಂಕ ವ್ಯಕ್ತಪಡಿಸಿದ್ದಾರೆ.