ರಾಜ್ಯ

ಧಾರವಾಡ ಜಿಲ್ಲಾಧಿಕಾರಿಗೆ ಪೂರ್ಣಕುಂಭದೊಂದಿಗೆ ಚಕ್ಕಡಿ ಮೆರವಣಿಗೆ ಮೂಲಕ ಸ್ವಾಗತಿಸಿದ ವನಹಳ್ಳಿ ಗ್ರಾಮಸ್ಥರು

ಧಾರವಾಡ prajakiran. com ಅ.16: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು ಬೆಳಿಗ್ಗೆ ಧಾರವಾಡ ತಾಲೂಕಿನ ಕಡೆಯ ಗ್ರಾಮ ವನಹಳ್ಳಿಯಲ್ಲಿ ಗ್ರಾಮ ವಾಸ್ತವ್ಯದ ಅಂಗವಾಗಿ ಆಗಮಿಸಿದಾಗ ಗ್ರಾಮಸ್ಥರು ಪೂರ್ಣಕುಂಭದ ಸ್ವಾಗತ ನೀಡಿದರು. ಎತ್ತಿನ ಚಕ್ಕಡಿ ಮೂಲಕ ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣೆಗೆ ಮೂಲಕ ಸಂಚರಿಸಿದರು. ಡೊಳ್ಳು ಕುಣಿತ, ಶಾಲಾ ಮಕ್ಕಳ ಪ್ರಭಾತಪೇರಿಯೊಂದಿಗೆ ಪುಷ್ಪಾರ್ಣೆ ಮಾಡಿ ಅತ್ಯಂತ ವಿಜೃಂಭಣೆಯಿಂದ ಪ್ರೀತಿ, ಅಭಿಮಾನದಿಂದ ಸ್ವಾಗತಿಸಿದರು. 

ಮೆರವಣಿಗೆಯಲ್ಲಿ ಗ್ರಾಮಸ್ಥರು, ಮಕ್ಜಳು, ಮಹಿಳೆಯರು, ಸಂಘ, ಸಂಸ್ಥೆಗಳ ಪ್ರತಿನಿಧಿಗಳು, ಗ್ರಾಮ ಪಂಚಾಯತ ಅಧ್ಯಕ್ಷ, ಸದಸ್ಯರು ಭಾಗವಹಿಸಿದ್ದರು.

ಮೆರವಣಿಗೆ ನಂತರ ವನಹಳ್ಳಿ ಸರಕಾರಿ ಶಾಲಾ ಆವರಣದಲ್ಲಿ ಗ್ರಾಮ ವಾಸ್ತವ್ಯ ಸವಿನೆನಪಿಗಾಗಿ ಜಿಲ್ಲಾಧಿಕಾರಿಗಳು ಹಾಗೂ ಅತಿಥಿಗಳು ಸಸಿ ನೆಟ್ಟರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *