ಧಾರವಾಡ prajakiran.com : ಕರೋನಾ ತಡೆಗಟ್ಟಲು ಮಾಸ್ಕ್ ಧರಿಸದಿರುವವರಿಗೆ ದಂಡ ವಿಧಿಸುವ ಕಾರ್ಯ ಚುರುಕುಗೊಳಿಸಲು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು.
ಕೋವಿಡ್ ನಿಯಂತ್ರಣ ಸೋಂಕಿತರ ಪತ್ತೆ ಕಾರ್ಯಕ್ಕೆ ಸ್ಥಳೀಯ ಆಸಕ್ತ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳನ್ನು ಕರೊನಾ ಸೈನಿಕರ ರೀತಿಯಲ್ಲಿ ಅವರನ್ನು ಸ್ವಯಂ ಸೇವಕರಾಗಿ ನಿಯೋಜಿಸಿಕೊಳ್ಳಬಹುದು.
ಇದಕ್ಕಾಗಿ ನಗರದ ಇಂಜಿನಿಯರಿಂಗ್ ಕಾಲೇಜುಗಳನ್ನು ಸಂಪರ್ಕಿಸಬಹುದು ಎಂದು ನೂತನ ಜಿಲ್ಲಾಧಿಕಾರಿ ನಿತೇಶ ಪಾಟೀಲ ಸಲಹೆ ನೀಡಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಕೋವಿಡ್ ನಿಯಂತ್ರಣಕ್ಕೆ ತ್ವರಿತ ಸಂಪರ್ಕ ಪತ್ತೆ ಕಾರ್ಯವನ್ನು ಆಸಕ್ತ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸ್ವಯಂ ಸೇವೆ ಪಡೆದು ಇನ್ನಷ್ಟು ಪರಿಣಾಮಕಾರಿಯಾಗಿಸಬಹುದು.
ಚಿಕಿತ್ಸೆ ನಂತರ ಗುಣಮುಖರಾಗಿ ಬಿಡುಗಡೆಯಾಗುವ ವ್ಯಕ್ತಿಗಳು ಸಾಮಾಜಿಕ ತಾರತಮ್ಯಕ್ಕೆ ಒಳಗಾಗದಂತೆ ಸಾಧ್ಯವಾದಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು.
ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರುವವರಿಗೆ ಉತ್ತಮ ಆಹಾರ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು ಎಂದರು.