*ಧಾರವಾಡದ ಡಿಡಿಪಿಯು ಕಚೇರಿಯ ಮೇಲೆ ಲೋಕಾಯುಕ್ತ ದಾಳಿ*
*ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ*
ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕಚೇರಿ ಮೇಲೆ ಲೋಕಾಯುಕ್ತರು ಗುರುವಾರ ದಾಳಿ ನಡೆಸಿದರು.
ಈ ವೇಳೆ ಕಚೇರಿಯಲ್ಲಿ ಲಂಚ ಪಡೆಯುವಾಗ ಇಬ್ಬರು ಲಂಚ ಸಮೇತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಧಾರವಾಡದ ಆರ್ ಎನ್ ಶೆಟ್ಟಿ ಮೈದಾನದ ಎದುರುಗಡೆಯಿರುವ ಬಿಇಒ ಕಚೇರಿ ಪಕ್ಕದ ಡಿಡಿಪಿಯು ಕಚೇರಿಯಲ್ಲಿ ಈ ಘಟನೆ ನಡೆದಿದೆ.
ಸೆಕ್ಷನ್ ಆಫೀಸರ್ ದುರ್ಗಾದಾಸ್ ಮಸೂತಿ ಹಾಗೂ ಪ್ರಥಮ ದರ್ಜೆ ಸಹಾಯಕ ನಾಗರಾಜ್ ಹೂಗಾರ್ ಎಂಬುವವರು
ನಿವೃತ್ತ ಶಿಕ್ಷಕ ಸುಭಾಸ ಜವರೆಡ್ಡಿ ಬಳಿ ಪಿಂಚಣಿ ಹಣ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು.
ಇಂದು ನಿವೃತ್ತ ಶಿಕ್ಷಕರಿಂದ 15 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಬ್ಬಿ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ತನಿಖೆ ಮುಂದುವರೆದಿದೆ.