ನವದೆಹಲಿ Prajakirana. com: ದೆಹಲಿಯಲ್ಲಿ ಭಾರೀ ಪ್ರಮಾಣದಲ್ಲಿ ಕೋವಿಡ್ ಸೋಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಇಂದು ರಾತ್ರಿ 10ಗಂಟೆಯಿಂದ ಏಪ್ರಿಲ್ 26ರ ವರೆಗೆ ಬೆಳಗ್ಗೆ 5 ಗಂಟೆಯವರೆಗೆ ಲಾಕ್ ಡೌನ್ ಜಾರಿಗೊಳಿಸಿರುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಎಲ್ಲಾ ಖಾಸಗಿ ಕಚೇರಿ, ಕಂಪನಿಗಳು ವರ್ಕ್ ಫ್ರಂ ಹೋಮ್ ಹಾಗೂ ಸರ್ಕಾರಿ ಕಚೇರಿಗಳು ಮತ್ತು ಅಗತ್ಯ ಸೇವೆಗಳು ಮಾತ್ರ ಲಭ್ಯವಿರಲಿದೆ ಎಂದು ಮೂಲಗಳು ತಿಳಿಸಿವೆ.
ಲಾಕ್ ಡೌನ್ ನಿಂದ ಕೋವಿಡ್ ತಡೆಯಲು ಸಾಧ್ಯವಿಲ್ಲ, ಆದರೆ ಸಣ್ಣ ಅವಧಿಯ ಲಾಕ್ ಡೌನ್ ನಿಂದ ಸೋಂಕು ಹರಡುವುದನ್ನು ತಡೆಗಟ್ಟಬಹುದಾಗಿದೆ ಎಂದು ಕೇಜ್ರಿವಾಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ತಿಳಿಸಿದ್ದಾರೆ.
ದೆಹಲಿಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಮತ್ತು ರೆಮ್ಡಿಸಿವಿರ್ ಲಸಿಕೆ ಕೊರತೆ ಎದುರಿಸುವಂತಾಗಿದೆ.
ಇದೊಂದು ಸಣ್ಣ ಅವಧಿಯ ಲಾಕ್ ಡೌನ್ ಹೇರಿಕೆಯಾಗಿದ್ದು, ವಲಸೆ ಕಾರ್ಮಿಕರು ದೆಹಲಿಯನ್ನು ಬಿಟ್ಟು ತೆರಳಬಾರದು ಎಂದು ಕೇಜ್ರಿವಾಲ್ ಮನವಿ ಮಾಡಿಕೊಂಡಿದ್ದಾರೆ.