ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪರಿಸ್ಥಿತಿ ಕುರಿತು ಹೇಳಿಕೆ ನೀಡಿದ್ದ ಎಐಸಿಸಿ ಸದಸ್ಯ ದೀಪಕ ಚಿಂಚೋರೆ ಗುರುವಾರ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಖುದ್ದು ಭೇಟಿಯಾಗಿ ವಿವರಣೆ ನೀಡಿದರು.
ದಲಿತ ಮಧ್ಯಮ ವರ್ಗದ ವ್ಯಕ್ತಿಯೊಬ್ಬನ ಚಿಕಿತ್ಸೆ ಕುರಿತು ಅನುಭವಿಸಿದ ಸಂಕಷ್ಟ ಸವಾಲುಗಳ ಕುರಿತು ಧಾರವಾಡ ಜಿಲ್ಲಾಸ್ಪತ್ರೆ ಹಾಗೂ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ
ಸಂಪರ್ಕ ಸಾಧಿಸಿದ ವೈದ್ಯರ ಹೆಸರು, ಅವರು ಎದುರಿಸಿದ ಅಸಹಾಯಕತೆ ಕುರಿತು ವಿವರಣೆ ನೀಡಿದ್ದಾರೆ.
ಕರೋನಾ ಪಾಸಿಟಿವ್ ವರದಿ ಬರಲು ಮೂರು ದಿನ ಹಿಡಿದಿದೆ . ಅಷ್ಟರಲ್ಲೇ ಅವರ ಆರೋಗ್ಯ ಕುಸಿದು ಹೋಗಿತ್ತು.
ಕರೋನಾ ಪಾಸಿಟಿವ ವರದಿ
ಬಂದ ಹತ್ತು ಗಂಟೆಗಳ ನಂತರ ಆ ದಲಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಹೀಗಾಗಿ ಬಹಳಷ್ಟು ನೋಂದು ವ್ಯವಸ್ಥೆ ಕುರಿತು ಭಾವನಾತ್ಮಕವಾಗಿ ಮಾತನಾಡಿದ್ದೇನೆ ಹೊರತು ಇದರಲ್ಲಿ ಯಾವುದೇ ರೀತಿಯ ದುರುದ್ದೇಶವಿರಲಿಲ್ಲ.
ಜೊತೆಗೆ ಜನರಿಗೆ ಭಯ, ಭೀತಿ ಸೃಷ್ಟಿಸಲು ಅಲ್ಲ ಎಂದು ಎಐಸಿಸಿ ಸದಸ್ಯ ದೀಪಕ ಚಿಂಚೋರೆ ವಿವರಣೆ ನೀಡಿದ್ದಾರೆ.
ಇದಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಇಂತಹ ಪ್ರಕರಣಗಳು ಕಂಡು ಬಂದಲ್ಲಿ ನೇರವಾಗಿ ಜಿಲ್ಲಾಡಳಿತ ಇಲ್ಲವೇ ನನ್ನ ಗಮನಕ್ಕೆ ತನ್ನಿ.
ಅದನ್ನು ಸರಿಪಡಿಸಲು ಪ್ರಯತ್ನ ಮಾಡೋಣ
ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ ಎಂದು ಎಐಸಿಸಿ ಸದಸ್ಯ ದೀಪಕ ಚಿಂಚೋರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.