ಜಿಲ್ಲೆ

ಸಹಕಾರಿ ರಂಗದ ಧುರೀಣ ದೇಸಾಯಿಗೌಡರು ಇನ್ನಿಲ್ಲ

ಧಾರವಾಡ prajakiran.com : ಧಾರವಾಡ ಜಿಲ್ಲೆಯ ನವಲಗುಂದ ಪಿಎಲ್ ಡಿ (PLD) ಬ್ಯಾಂಕಿನ ಅಧ್ಯಕ್ಷರು, ಸಹಕಾರಿ ಧುರೀಣರಾಗಿದ್ದ ದೇಸಾಯಿಗೌಡ್ರು ಶಂಕರಗೌಡ ಪಾಟೀಲ್ ಇವರು ಮೇ 4 ರಂದು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು‌.

ದೇಸಾಯಿ ಗೌಡ್ರು ನವಲಗುಂದ ತಾಲೂಕಿನ ಮಾಜಿ ಶಾಸಕರಾದ ದಿ. ಶಂಕರಗೌಡ್ರ.ವಿ.ಪಾಟೀಲ.(ಶಲವಡಿ) ಅವರ ಪುತ್ರರಾಗಿದ್ದರು.

ಪ್ರಸ್ತುತ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು, ಈ ಹಿಂದೆ ಧಾರವಾಡ ಜಿಲ್ಲಾ ಪಂಚಾಯತ ಸದಸ್ಯ , ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಸಹೋದರರಾಗಿರುವ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಬಾಪುಗೌಡ ಪಾಟೀಲ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

ದೇಸಾಯಿಗೌಡ್ರು ನಿಧನನಿಂದ ಸಹಕಾರ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ದು:ಖ ತಡೆಯುವ ಶಕ್ತಿ ನೀಡಲೆಂದು ಅನೇಕರು ಪ್ರಾರ್ಥಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *