ಹುಬ್ಬಳ್ಳಿ prajakiran.com : ತೀವ್ರ ಉಸಿರಾಟದ ತೊಂದರೆಯ ( SARI) ಲಕ್ಷಣದಿಂದ ಕಳೆದ ಮೇ 3 ರಂದು ಕೋವಿಡ್ ದೃಢಪಟ್ಟಿದ್ದ, ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಢಾಣಕ ಶಿರೂರಿನ ಮಹಿಳೆ ಸಂಪೂರ್ಣ ಗುಣಮುಖರಾಗಿದ್ದಾರೆ.
ಅವರನ್ನು ನಿನ್ನೆ ಮೇ 23 ರ ಶನಿವಾರ ಸಂಜೆ ಹುಬ್ಬಳ್ಳಿಯ ಕಿಮ್ಸ್ ನಿಂದ ಬಿಡುಗಡೆಗೊಳಿಸಲಾಯಿತು.
ಗುಣಮುಖರಾದ ಮಹಿಳೆಯನ್ನು ಚಪ್ಪಾಳೆ ತಟ್ಟಿ, ಶುಭ ಹಾರೈಸಿ ಬೀಳ್ಕೊಟ್ಟರು. ಕಳೆದ 20 ದಿನಗಳ ಅವಧಿಯಲ್ಲಿ ತಮಗೆ ಚಿಕಿತ್ಸೆ ನೀಡಿ, ದೈಹಿಕ ಮತ್ತು ಮಾನಸಿಕ ಆರೋಗ್ಯ ರಕ್ಷಿಸಿದ ಕಿಮ್ಸ್ ಆಸ್ಪತ್ರೆಯ ವೈದ್ಯರಿಗೆ ಹಾಗೂ ಸಿಬ್ಬಂದಿಗೆ ಗುಣಮುಖರಾದ ಮಹಿಳೆ ಕೃತಜ್ಞತೆ ಸಲ್ಲಿಸಿದರು.
ಧಾರವಾಡ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್, ಜಿಪಂ ಸಿಇಓ ಡಾ.ಬಿ.ಸಿ.ಸತೀಶ, ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ, ಮಹಾನಗರಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ,ಕಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಅರುಣಕುಮಾರ್ ಚವ್ಹಾಣ, ಉಪವೈದ್ಯಕೀಯ ಅಧೀಕ್ಷಕ ರಾಜಶೇಖರ ದ್ಯಾಬೇರಿ, ತಜ್ಞ ವೈದ್ಯರಾದ ಡಾ.ಈಶ್ವರ ಹಸಬಿ, ಡಾ.ಲಕ್ಷ್ಮೀಕಾಂತ ಲೋಕರೆ, ಡಾ.ಮಹೇಶ, ಆಸ್ಪತ್ರೆಯ ನರ್ಸ್, ಅರೆವೈದ್ಯಕೀಯ ಸಿಬ್ಬಂದಿ ಮತ್ತಿತರರು ಇದ್ದರು.