ಧಾರವಾಡ prajakiran.com : ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 17 ರಂದು 11 ಎಫ್.ಐ.ಆರ್. ಗಳಿಗೆ ಮಧ್ಯಂತರ ತಡೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಅರ್ಜಿಗಳನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ.
158 ಜನರ ಮೇಲೆ ದಾಖಲಾಗಿದ್ದ 12 ಎಫ್ಐಆರ್ ಗಳ ಪೈಕಿ 11 ಎಫ್ಐಆರ್ಗೆ ಕಳೆದ ತಿಂಗಳು ಇದೇ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು.
ಬಳಿಕ ವಿಚಾರಣೆ ನಡೆಸಿದ ಹೈಕೋರ್ಟ್ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ.
ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ಹುಬ್ಬಳ್ಳಿ ಪೊಲೀಸರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ.
ಏ. 16ರಂದು ಹಳೇ ಹುಬ್ಬಳ್ಳಿ ಠಾಣೆ ಎದುರು ದೊಡ್ಡ ಗಲಭೆ ನಡೆದು, ಒಟ್ಟು 12 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದ ಪೊಲೀಸರು, 158 ಆರೋಪಿಗಳನ್ನು ಬಂಧಿಸಿ, ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಕಳಿಸಿದ್ದರು.
12 ಪ್ರಕರಣಗಳ ಪೈಕಿ 11 ಎಫ್ ಐ ಆರ್ ವಿರುದ್ಧ ಆರೋಪಿಗಳ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ವೇಳೆ 11 ಎಫ್.ಐ.ಆರ್. ಗೆ ಮಧ್ಯಂತರ ತಡೆಯಾಜ್ಞೆ ನೀಡಲಾಗಿತ್ತು. ಈ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಕೋರಿ ಪೊಲೀಸರು ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.
ಎರಡೂ ಕಡೆಯವರ ವಾದ ಆಲಿಸಿದ ನ್ಯಾಯಮೂರ್ತಿಗಳು ಆರೋಪಿ ಪರ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದ್ದಾರೆ.
ಹೈಕೋರ್ಟ್ ನ ಈ ತೀರ್ಪಿನಿಂದಾಗಿ ಪೊಲೀಸರ ನೈತಿಕ ಸ್ಥೈರ್ಯ ಹೆಚ್ಚಿದಂತಾಗಿದೆ.