ಜಿಲ್ಲೆ

ಧಾರವಾಡ ಉಪವಿಭಾಗಾಧಿಕಾರಿಗಳಾಗಿ ಅಶೋಕ ತೇಲಿ ಅಧಿಕಾರ ಸ್ವೀಕಾರ

ಧಾರವಾಡ prajakiran.com : ಧಾರವಾಡ ಉಪವಿಭಾಗಾಧಿಕಾರಿಗಳಾಗಿ ಕೆಎಎಸ್ ಅಧಿಕಾರಿ ಅಶೋಕ ತೇಲಿ ಅವರು ಗುರುವಾರ ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು.

ಐಎಎಸ್ ಅಧಿಕಾರಿ ಡಾ. ಗೋಪಾಲಕೃಷ್ಣ ಬಿ., ಅವರು ಅಶೋಕ ತೇಲಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಅಶೋಕ್ ತೇಲಿ ಅವರು ಮೂಲತಃ
ವಿಜಯಪುರ ಜಿಲ್ಲೆಯ ಬಳ್ಳೊಳ್ಳಿಯವರು.
2004ರಲ್ಲಿ ಬಿಇ ಕಂಪ್ಯೂಟರ್ ಸೈನ್ಸ್ ಪದವಿ ಪೂರೈಸಿ
8 ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡಿದ್ದಾರೆ.
2014 ರ ಬ್ಯಾಚ್ ಕೆ ಎ ಎಸ್ ಅಧಿಕಾರಿಯಾಗಿದ್ದು
ಚಿಕ್ಕಬಳ್ಳಾಪುರದಲ್ಲಿ ಪ್ರೊಬೇಷನರ್ ಆಗಿ, ಜಮಖಂಡಿ ತಾಲೂಕು ಪಂಚಾಯಿತಿ ಇಒ ಆಗಿ ಬೆಳಗಾವಿ ಉಪವಿಭಾಗದ ಎಸಿ, ಎಸ್‌ಎಲ್‌ಎಒ ಎನ್‌ಎಚ್ ಧಾರವಾಡ ಮತ್ತು ಸವಣೂರು ಎಸಿ ಆಗಿ ಕಾರ್ಯ ನಿರ್ವಹಿಸಿ ಇದೀಗ ಧಾರವಾಡ ಉಪವಿಭಾಗಾಧಿಕಾರಿ ಹುದ್ದೆ ಅಲಂಕರಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *