ಧಾರವಾಡ prajakiran.com : ಧಾರವಾಡ ಹೊರವಲಯದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಇದರಿಂದಾಗಿ ಘಟನಾ: ಸ್ಥಳದಲ್ಲೇ 11 ಜನರ ರ್ದುಮರಣವನ್ನಿಪ್ಪಿದ್ದಾರೆ.
ಧಾರವಾಡದ ಇಟ್ಟಿಗಟ್ಟಿ ಬಳಿ ಈ ಘಟನೆ ನಡೆದಿದ್ದು, ಹಲವರಿಗೆ ಗಂಭೀರವಾದ ಗಾಯಗಳಾಗಿವೆ.
ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಟ್ರಾವೆಲರ್ ನಲ್ಲಿದ್ದ ದಾವಣಗೆರೆ ಜಿಲ್ಲೆಯ ಹಲವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇವರು ದಾವಣಗೆರೆಯಿಂದ ಧಾರವಾಡ ಮಾರ್ಗವಾಗಿ ಗೋವಾಕ್ಕೆ ಪ್ರಯಾಣಿಸುತ್ತಿದ್ದರು ಎಂದು ಗೊತ್ತಾಗಿದೆ.
ಧಾರವಾಡದ ಸಮೀಪ ಬೆಳಗಿನ ಜಾವ ಈ ದುರಂತ ಸಂಭವಿಸಿದೆ.ಸಾವನ್ನಪ್ಪಿದವರ ವಿವರ ತಿಳಿದುಬಂದಿಲ್ಲ.
ಮಾಹಿತಿಯನ್ನು ಅರಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಗ್ರಾಮೀಣ ಠಾಣೆಯ ಪಿಎಸ್ ಐ ಮಹೇಂದ್ರ ನಾಯಕ ಹಾಗೂ ತಂಡ ಗಾಯಾಳುಗಳನ್ನು ಧಾರವಾಡ ಜಿಲ್ಲೆಯ ಆಸ್ಪತ್ರೆಗೆ ರವಾನಿಸಿಸಿದರು.
ಅಪಘಾತದ ರಭಸಕ್ಕೆ ಟೆಂಪೋ ಟ್ರಾವೆಲರ್ ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಗಾಯಾಳುಗಳನ್ನು ಹಾಗೂ ಮೃತರ ಶವಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ನಡೆಸುತ್ತಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಪ್ರಜಾಕಿರಣ.ಕಾಮ್ ಗೆ ತಿಳಿಸಿದರು.
ಇವರ ಪೈಕಿ ಒಬ್ಬರು ಜೆ ಜೆ ಎಂ ಮೆಡಿಕಲ್ ಕಾಲೇಜ್ ಪ್ರಾಧ್ಯಾಪಕರು ಒಬ್ಬರು ಹಾಗೂ ಅವರ ಕುಟುಂಬದ ಸದಸ್ಯರು ಇದ್ದರು ಎಂದು ತಿಳಿದುಬಂದಿದೆ.
ಇವರು ದಾವಣಗೆರೆ ಯಿಂದ ಬೆಳಗಿನ ಜಾವ ಮೂರು ಗಂಟೆಗೆ ಬಿಟ್ಟಿದ್ದಾರೆ. ಇವರ ಪರಿಚಯಸ್ಥರಯಸ್ಥರೊಬ್ಬರ ಧಾರವಾಡದ ಗಾಂಧಿನಗರ ಮನೆಯಲ್ಲಿ ಉಪಹಾರ ಸೇವಿಸಿ ಗೋವಾಕ್ಕೆ ಪ್ರಯಾಣಿಸಬೇಕಿತ್ತು.
ಅಷ್ಟರಲ್ಲೇ ವಿಧಿ ಅವರನ್ನು ಬಾರದ ಲೋಕಕ್ಕೆ ಕರೆದುಕೊಂಡು ಹೋಗಿದೆ ಎಂದು ಪೊಲೀಸ್ ಮೂಲಗಳು ಪ್ರಜಾಕಿರಣ. ಕಾಮ್ ಗೆ ಖಚಿತ ಪಡಿಸಿವೆ