ಧಾರವಾಡ prajakiran.com : ಧಾರವಾಡ ಎಸಿಪಿ ಅನುಷಾ ಜಿ. ಅವರು ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸರ ಸಹಾಯದೊಂದಿಗೆ ಕೋವಿಡ್-೧೯ ವಿಶೇಷ ಜನಾಂದೋಲನ ಅಭಿಯಾನವನ್ನು ಹಮ್ಮಿಕೊಂಡು ಜನರ ಗಮನ ಸೆಳೆದರು.
ಧಾರವಾಡದ ಮಾರುಕಟ್ಟೆಗೆ ಬಂದ ಹಳ್ಳಿ ಜನರನ್ನು ಆತ್ಮೀಯತೆಯಿಂದ ಮಾತನಾಡಿಸಿ, ಮಾಸ್ಕ್ ಧರಿಸದೆ ಹೊರಗಡೆ ಸಂಚರಿಸದಂತೆ ಹಾಗೂ ಆರೋಗ್ಯ ಕಾಳಜಿ ವಹಿಸುವಂತೆ ಸಲಹೆ ನೀಡಿದರು.
ಅಲ್ಲದೆ, ಅನೇಕ ಹಿರಿಯ ಜೀವಗಳಿಗೆ ಸ್ವತಃ ಮಾಸ್ಕ್ ಹಾಕಿ ಜಾಗೃತಿ ಮೂಡಿಸಿದ್ದು ವಿಶೇಷವಾಗಿತ್ತು.
ಕರೋನಾ ಒಬ್ಬರಿಂದ ಒಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ಕೊರೊನಾದಿಂದ ಮುಕ್ತಿ ಹೊಂದಲು ಪದೇ ಪದೇ ಕೈ ತೊಳೆಯುವುದು, ಮಾಸ್ಕ್ ಧರಿಸುವುದು ಹಾಗೂ ಶಾರೀರಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮಾತ್ರ ಕೋವಿಡ್ ಹರಡುವಿಕೆ ತಡೆಗಟ್ಟಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.
ಅವರಿಗೆ ಧಾರವಾಡದ ಶಹರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಶ್ರೀಧರ ಸುತಾರೆ, ಪೊಲೀಸ್ ಸಿಬ್ಬಂದಿ ಸಾಥ್ ನೀಡಿದರು.