ಅಪರಾಧ

ಧಾರವಾಡದಲ್ಲಿ ಸಿಡಿಲು ಬಡಿದು ಕೃಷಿ ವಿವಿ ಹಂಗಾಮಿ ನೌಕರ ಮಹಿಳೆ ಸಾವು

ಧಾರವಾಡ prajakiran.com : ಶನಿವಾರ ಸಂಜೆ ಸುರಿಯುತ್ತಿರುವ ಧಾರಾಕಾರ ಮಳೆಗೆ  ಸಿಡಿಲು ಬಡಿದು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹಂಗಾಮಿ ನೌಕರರಾಗಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ.

ಕೃಷಿ ವಿಶ್ವವಿದ್ಯಾಲಯದಲ್ಲಿ ಕಳೆದ 11 ವರ್ಷಗಳಿಂದ ಹಂಗಾಮಿ ನೌಕರರಾಗಿ ಕೆಲಸ ನಿರ್ವಹಣೆ ಮಾಡಿಕೊಂಡು ಬಂದಿದ್ದ, ಸರಸ್ವತಿ ಪಾಟೀಲ ಎಂಬ ಮಹಿಳೆ ಮಧ್ಯಾಹ್ನ 3-30 ಗಂಟೆಗೆ ಬೀಜ ಘಟಕದಲ್ಲಿ ಕೆಲಸ ನಿರ್ವಹಣೆ ಮಾಡುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಘಟನೆ ನಡೆದ ಮಾಹಿತಿಯನ್ನು ಅರಿತು ಸ್ಥಳಕ್ಕೆ ಧಾರವಾಡ ಉಪನಗರ ಪೊಲೀಸ್ ಭೇಟಿ ನೀಡಿ ಪರಿಶೀಲಿಸಿ ಮರಣೋತ್ತರ ಪರೀಕ್ಷೆ ಗೆ ರವಾನಿಸಿದರು.

ಈ ಕುರಿತು ಧಾರವಾಡ ಉಪನಗರ ಪೊಲೀಸ್ ಠಾಣೆ ಯಲ್ಲಿ ಪದರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದರಿಂದಾಗಿ ವಿಶ್ವವಿದ್ಯಾಲಯದ ಹಂಗಾಮಿ ನೌಕರರು ಆತಂಕಗೊಂಡಿದ್ದಾರೆ.
ಮೃತ ಮಹಿಳೆ ಕುಟುಂಬಕ್ಕೆ ರಾಜ್ಯ ಸರ್ಕಾರ ಹಾಗೂ ಕೃಷಿ ವಿಶ್ವವಿದ್ಯಾಲಯ ಸೂಕ್ತ ಪರಿಹಾರ ಧನ ನೀಡಬೇಕು ಎಂದು ನೌಕರರು ಆಗ್ರಹಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *