ಧಾರವಾಡ prajakiran.com : ಶನಿವಾರ ಸಂಜೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಸಿಡಿಲು ಬಡಿದು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹಂಗಾಮಿ ನೌಕರರಾಗಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ.
ಕೃಷಿ ವಿಶ್ವವಿದ್ಯಾಲಯದಲ್ಲಿ ಕಳೆದ 11 ವರ್ಷಗಳಿಂದ ಹಂಗಾಮಿ ನೌಕರರಾಗಿ ಕೆಲಸ ನಿರ್ವಹಣೆ ಮಾಡಿಕೊಂಡು ಬಂದಿದ್ದ, ಸರಸ್ವತಿ ಪಾಟೀಲ ಎಂಬ ಮಹಿಳೆ ಮಧ್ಯಾಹ್ನ 3-30 ಗಂಟೆಗೆ ಬೀಜ ಘಟಕದಲ್ಲಿ ಕೆಲಸ ನಿರ್ವಹಣೆ ಮಾಡುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ಘಟನೆ ನಡೆದ ಮಾಹಿತಿಯನ್ನು ಅರಿತು ಸ್ಥಳಕ್ಕೆ ಧಾರವಾಡ ಉಪನಗರ ಪೊಲೀಸ್ ಭೇಟಿ ನೀಡಿ ಪರಿಶೀಲಿಸಿ ಮರಣೋತ್ತರ ಪರೀಕ್ಷೆ ಗೆ ರವಾನಿಸಿದರು.
ಈ ಕುರಿತು ಧಾರವಾಡ ಉಪನಗರ ಪೊಲೀಸ್ ಠಾಣೆ ಯಲ್ಲಿ ಪದರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಇದರಿಂದಾಗಿ ವಿಶ್ವವಿದ್ಯಾಲಯದ ಹಂಗಾಮಿ ನೌಕರರು ಆತಂಕಗೊಂಡಿದ್ದಾರೆ.
ಮೃತ ಮಹಿಳೆ ಕುಟುಂಬಕ್ಕೆ ರಾಜ್ಯ ಸರ್ಕಾರ ಹಾಗೂ ಕೃಷಿ ವಿಶ್ವವಿದ್ಯಾಲಯ ಸೂಕ್ತ ಪರಿಹಾರ ಧನ ನೀಡಬೇಕು ಎಂದು ನೌಕರರು ಆಗ್ರಹಿಸಿದ್ದಾರೆ.