ಧಾರವಾಡ prajakiran.com : ಧಾರವಾಡದ ಅಂಗನವಾಡಿ ಕೇಂದ್ರಗಳ ಮೂಲಕ ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ಕಳಪೆ ಗುಣಮಟ್ಟದ ಆಹಾರ ಧಾನ್ಯ ಪೂರೈಕೆ ಮಾಡಲಾಗುತ್ತಿದೆ.
ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ,
ಸಮತಾ ಸೇನೆ ಸದಸ್ಯರು ಮಂಗಳವಾರ ಧಾರವಾಡದ
ಸಮಗ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಎದುರು ಆಹಾರ ಧಾನ್ಯಗಳನ್ನು ಇಟ್ಟು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.
ಅಂಗನವಾಡಿ ಕೇಂದ್ರಗಳಿಂದ ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ನೀಡುವ ರವೆ, ಹಿಟ್ಟು, ಧಾನ್ಯಗಳು ಸಂಪೂರ್ಣ ಕಳಪೆಮಟ್ಟದ್ದಾಗಿವೆ.
ಅವುಗಳನ್ನು ದನಗಳೂ ಸಹ ತಿನ್ನುವುದಿಲ್ಲ. ಅಂತಹ ಆಹಾರ ಧಾನ್ಯಗಳನ್ನು ಪೂರೈಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ಕಳಪೆ ಆಹಾರ ಧಾನ್ಯ ಪೂರೈಕೆಯಾಗುತ್ತಿರುವುದನ್ನು ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.