ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸರು ಹಾಗೂ ಧಾರವಾಡ ಜಿಲ್ಲೆಯ ಪೊಲೀಸ್ ಇಲಾಖೆಯನ್ನು ಕರೋನಾ ಬೆಂಬಿಡದೆ ಕಾಡುತ್ತಲೇ ಇದೆ.
ನಿನ್ನೇಯಷ್ಟೇ ಧಾರವಾಡದ ಪೊಲೀಸ್ ತರಬೇತಿ ಶಾಲೆಯ 46 ಪ್ರಶಿಕ್ಷಣಾರ್ಥಿಗಳು, 12 ಜನ ಪೊಲೀಸರ ಕುಟುಂಬ ಸದಸ್ಯರು ಹಾಗೂ ಧಾರವಾಡ ಶಹರ ಪೊಲೀಸ್ ಠಾಣೆಯ ಮಹಿಳಾ ಪಿಎಸ್ ಐ ಅವರಿಗೆ ವಕ್ಕರಿಸಿದ್ದ ಕರೋನಾ ಭಾನುವಾರವೂ ತನ್ನ ಜಾಲ ವಿಸ್ತರಿಸಿದೆ.
ಧಾರವಾಡ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಹಾಯಕ ಪೊಲೀಸ್ ಸಬ್ ಇನ್ಸಪೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದಅಧಿಕಾರಿಗೂ ಕರೋನಾ ಹರಡಿದೆ.
ಹೀಗಾಗಿ ಧಾರವಾಡದ ಟ್ರಾಫೀಕ್ ಪೊಲೀಸ್ ಠಾಣೆ, ಟೌನ್ ಪೊಲೀಸ ಠಾಣೆ ಹಾಗೂ ವಿಶೇಷವಾಗಿ ಎಸಿಪಿ ಕಚೇರಿಯ ಪೊಲೀಸ್ ಸಿಬ್ಬಂದಿಗೂ ಕರೋನಾ ಆತಂಕ ಸೃಷ್ಟಿಸಿದೆ.
ಇದರಿಂದಾಗಿ ಹಲವರು ಅವರ ಪ್ರಾಥಮಿಕ ಸಂಪರ್ಕಿತರು ಹಾಗೂ ದ್ವಿತೀಯ ಸಂಪರ್ಕಿತರು ಇದೀಗ ಸ್ವಯಂ ಪ್ರೇರಣೆಯಿಂದ ಹೋಂ ಕ್ವಾರಂಟಿನ್ ಹಾಗೂ ತಪಾಸಣೆ ಮಾಡಿಸಿಕೊಂಡು ಮನೆಯಲ್ಲಿಯೇ ಐಸೋಲೇಶನ್ ಮಾಡಿಕೊಳ್ಳಲು ಮುಂದಾಗಿದ್ದಾರೆ.
50 ವರ್ಷ ಮೇಲ್ಪಟ್ಟವರಿಗೆ ವಿನಾಯಿತಿ ಇಲ್ಲ ;
ಆರೋಗ್ಯ, ಕಂದಾಯ, ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕರೋನಾ ಸೇನಾನಿ ಪೊಲೀಸರಿಗೆ ಹಾಗೂ ಅಧಿಕಾರಿಗಳಿಗೆ ಮತ್ತು ಅದರಲ್ಲೂ ವಿಶೇಷವಾಗಿ ವಿವಿಧ ರೋಗ, ರುಜಿನಗಳಿಂದ ಬಳಲುತ್ತಿರುವ ಸಿಬ್ಬಂದಿಗೆ ಕೆಲಸಕ್ಕೆ ನಿಯೋಜಿಸದಂತೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ.
ಆದರೆ ಅದು ಹುಬ್ಬಳ್ಳಿ-ಧಾರವಾಡದಲ್ಲಿ ಅಷ್ಟೊಂದು ಪರಿಣಾಮಕಾರಿಯಾಗಿ ಜಾರಿಯಾಗಿಲ್ಲ ಎಂಬ ಕೂಗು ಕೇಳಿಬಂದಿದೆ.
ಕನಿಷ್ಟ ಸಕ್ಕರೆ ಕಾಯಿಲೆ, ಮಧುಮೇಹದಿಂದ ಬಳಲುತ್ತಿರುವ ಪೊಲೀಸ್ ಸಿಬ್ಬಂದಿಗೆ ಹಾಗೂ ಹೃದಯ ಸಂಬಂಧಿ ಕಾಯಿಲೆಯವರಿಗೆ ವಿನಾಯಿತಿ ನೀಡಿದರೆ ಒಳ್ಳೆಯದು.
ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಾಗೂ ಧಾರವಾಡ ಜಿಲ್ಲಾಡಳಿತ ಗಂಭೀರವಾಗಿ ಚಿಂತನೆ ನಡೆಸಿ ಸೂಕ್ತ ಜರುಗಿಸುವುದೇ ಎಂಬುದು ಕಾದು ನೊಡಬೇಕಿದೆ.