ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿನ ಆಯುಷ್ ವೈದ್ಯರು ಕೂಡ ಬುಧವಾರದಿಂದ ಆರಂಭಗೊಂಡ ರಾಜ್ಯವಾಪ್ತಿ ಅನಿರ್ಧಿಷ್ಠಾವಧಿ ಹೋರಾಟಕ್ಕೆ ತಮ್ಮ ಬೆಂಬಲ ಸೂಚಿಸಿದರು.
ರಾಜ್ಯ ಸರ್ಕಾರ ಆಯುಷ್ ವೈದ್ಯರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂದು ಆರೋಪಿಸಿ ಆಯುಷ್ ಫೆಡರೆಷನ್ ಆಫ್ ಇಂಡಿಯಾ ಹೋರಾಟಕ್ಕೆ ಕರೆ ನೀಡಿದ ಹಿನ್ನಲೆಯಲ್ಲಿ
ಧಾರವಾಡ ಜಿಲ್ಲಾ ಘಟಕದವತಿಯಿಂದ ಆಯುಷ್ ವೈದ್ಯರು ತಮ್ಮ ಕ್ಲಿನಿಕ್ ಗಳನ್ನು ಬಂದ್ ಮಾಡಿ ಹೋರಾಟಕ್ಕೆ ಸಾಥ್ ನೀಡಿದರು.
ತಮ್ಮ ವಿವಿಧ ಬೇಡಿಕೆಗಳಿಗೆ ಸರಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಆಯುಷ್ ವೈದ್ಯರು ಕ್ಲಿನಿಕ್ಗಳನ್ನು ಬಂದ್ ಮಾಡಿ ಹೋರಾಟಕ್ಕೆ ಇಳಿದಿದ್ದೇವೆ. ಈ ಬಗ್ಗೆ ಜಿಲ್ಲಾ ಆಡಳಿತಕ್ಕೆ ಈಗಾಗಲೇ ಮಾಹಿತಿ ನೀಡಿದ್ದೇವು.
ಅದರಂತೆ ಇಂದಿನಿಂದ ಅನಿರ್ಧಿಷ್ಠಾವಧಿ ಹೋರಾಟ ಆರಂಭಿಸಿದ್ದೇವೆ ಎಂದು ಆಯುಷ್ ಫೆಡರೆಷನ್ ಆಫ್ ಇಂಡಿಯಾದ ಧಾರವಾಡ ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ.ಪ್ರಭಾಕರ ಮಾಂಡ್ರೆ ತಿಳಿಸಿದ್ದಾರೆ.
ಎಎಫ್ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಸೋಮಶೇಖರ ಹುದ್ದಾರ, ಡಾ. ಅಮಿತ ಎಂ.ಎಸ್., ಡಾ. ಶಾನೂಲ್ ಕಟಕೋಳ, ಡಾ. ಬಿ.ಎಸ್.ಗೌಡಪ್ಪಗೌಡ, ಡಾ. ವಿ.ಎಸ್.ಕೆ.ಮಠ, ಡಾ.ರಾಜಶೇಖರ ರಾಜೇಶ್ವರ, ಡಾ.ಮಂಜುನಾಥ ಕರಶೆಟ್ಟಿ ಸೇರಿದಂತೆ ಜಿಲ್ಲೆಯ ಎಲ್ಲ ಆಯುಷ್ ವೈದ್ಯರು ತಮ್ಮ ಕ್ಲಿನಿಕ್ಗಳನ್ನು ಮುಚ್ಚಿದ್ದಾರೆ ಎಂದು ಮಾಂಡ್ರೆ ವಿವರಿಸಿದ್ದಾರೆ.