ರಾಜ್ಯ

ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ , ಬಂಧನ ಬಿಡುಗಡೆ  

ಧಾರವಾಡ Prajakiran.com : ಕೇಂದ್ರ ಮತ್ತು ರಾಜ್ಯ ಸರಕಾರದ ರೈತ ವಿರೋಧಿ ನೀತಿ ಖಂಡಿಸಿ ಅವಳಿ ನಗರ ನಡುವಿನ ರಾಯಪೂರದ ಬಳಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಬಿ.ಜೆ.ಪಿ ನೇತೃತ್ವದ ಕೇಂದ್ರ-ರಾಜ್ಯ ಸರ್ಕಾರಗಳು ಮಂಡಿಸಿರುವ ರೈತರ ವಿರೋಧಿ ಕೃಷಿ ಮಸೂದೆಗಳನ್ನು ಅಂಗೀಕರಿಸುವ ಮೂಲಕ ರೈತರು-ಕಾರ್ಮಿಕರಿಗೆ ಮಾರಕವಾಗಿಸಿದೆ.

ಭೂ ಸುಧಾರಣೆ ಕಾಯ್ದೆತಿದ್ದುಪಡಿ, ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ, ವಿದ್ಯುಚ್ಛಕ್ತಿ ಕಾಯ್ದೆಯ ತಿದ್ದುಪಡಿಗಳನ್ನು ಯಾವುದೇ ಚರ್ಚೆ ಇಲ್ಲದೇ ಜಾರಿಗೊಳಿಸುತ್ತಿವೆ.

ರೈತರಿಗೆ ಮಾರಕವಾಗುವ ಈ ಮೂರೂ  ಮಸೂದೆಗಳನ್ನು ಚರ್ಚೆಗೆ ಅವಕಾಶ ನೀಡದೇ ಸುಗ್ರೀವಾಜ್ಙೆಯ ಮೂಲಕ ಸಂಸತ್ತಿನಲ್ಲಿ ಅಂಗೀಕರಿಸಿರುವುದು ಈ ದೇಶಧ ದುರಂತ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ ಆರೋಪಿಸಿದರು.

ಪ್ರತಿಭಟನಾಕಾರರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದ್ದರಿಂದ ಹುಬ್ಬಳ್ಳಿ- ಧಾರವಾಡ ಮಧ್ಯ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಇದರಿಂದ ಬಹುತೇಕ ವಾಹನ ಸವಾರರು ಅನ್ಯ ಮಾರ್ಗದ ಮೂಲಕ ತೆರಳುವಂತಾಯಿತು.

ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಎಸಿಪಿ ಅನುಷಾ ಆಗಮಿಸಿದ ಬಳಿಕ ಪೊಲೀಸರು ಪ್ರತಿಭಟನಾ ನಿರತರನ್ನು ಬಂಧಿಸಿ, ನಂತರ ಬಿಡುಗಡೆ ಮಾಡಿದರು.

ರೈತ ಮುಖಂಡರಾದ ಶಂಕರಪ್ಪ ಅಂಬಲಿ, ಮಲ್ಲಿಕಾರ್ಜುನ ಸಿಂದಗಿ, ಕಾಂಗ್ರೆಸ್ ಮುಖಂಡರಾದ ಸ್ವ್ವಾತಿ ಮಾಳಗಿ, ಮಂಜುನಾಥ ಭೋವಿ, ಎಸ್.ಎ.ಪವಾರ,ಆನಂದ ಆಧೋನಿ, ಬಾಲಚಂದ್ರ ಸುರಕೋಡ ಸೇರಿದಂತೆ ಅನೇಕ ರೈತರು ಪ್ರತಿಭಟನೆಯಲ್ಲಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *