ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕರೋನಾ ವೈರಸ್ ಗೆ ಮತ್ತೊಂದು ಬಲಿಯಾಗಿದ್ದು, ಆ ಮೂಲಕ ಜಿಲ್ಲೆಯ ಸಾವಿನ ಸಂಖ್ಯೆ ಹದಿಮೂರಕ್ಕೆ ಏರಿಕೆಯಾಗಿದೆ.
ಧಾರವಾಡ ತಾಲೂಕಿನ ಸೋಮಾಪುರ ಗ್ರಾಮದ ವ್ಯಕ್ತಿ P 25517 ನ ಸೋಂಕಿತ ಚಿಕಿತ್ಸೆ ಫಲಿಸದೆ ಮಂಗಳವಾರ ಮರಣ ಹೊಂದಿದ್ದಾನೆ ಎಂದು ಧಾರವಾಡ ಜಿಲ್ಲಾಡಳಿತ ತಿಳಿಸಿದೆ.
58 ವರ್ಷ ದ ಪುರುಷ, ನಿನ್ನೆ ಜುಲೈ 6 ರಂದು ಕೆಮ್ಮು, ನೆಗಡಿ, ಜ್ವರ ಲಕ್ಷಣದ ಕಾರಣದಿಂದ ಧಾರವಾಡ ಜಿಲ್ಲಾಸ್ಪತ್ರೆಗೆ ಬಂದು ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ನೀಡಿ, ಮನೆಗೆ ತೆರಳಿದ್ದ.
ಅವರು ಮನೆಗೆ ತೆರಳಿದ್ದ ನಂತರ ಮೃತಪಟ್ಟಿದ್ದರು. ಆ ಬಳಿಕ ಅವರ ಕೋವಿಡ್ ತಪಾಸಣೆ ವರದಿ ಪರಿಶೀಲಿಸಿದಾಗ ಅವರಿಗೆ ಕೋವಿಡ್ 19 ಪಾಸಿಟಿವ್ ಇರುವುದು ದೃಢಪಟ್ಟಿದೆ.
ಹೀಗಾಗಿ ಅವರಅಂತ್ಯಕ್ರಿಯೆಯನ್ನು ರಾಜ್ಯ ಸರ್ಕಾರದ ಮಾರ್ಗಸೂಚಿಗಳಂತೆ ಸ್ವಗ್ರಾಮ ಸೋಮಾಪುರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಹಿನ್ನಲೆಯಲ್ಲಿ ಧಾರವಾಡ ತಾಲೂಕಿನ ಸೋಮಾಪುರ ಗ್ರಾಮದಲ್ಲಿ ಕೂಡ ಆತಂಕ ಮನೆ ಮಾಡಿದೆ.
ಈಗಾಗಲೇ ಧಾರವಾಡ ಜಿಲ್ಲೆಯ ಮೊರಬ, ಶಿರಕೋಳ, ನರೇಂದ್ರ, ಗರಗ ಸೇರಿದಂತೆ ಹತ್ತಾರು ಹಳ್ಳಿಗಳಿಗೂ ಕರೋನಾ ವ್ಯಾಪಿಸಿರುವುದು ಜನತೆಯನ್ನು ಬೆಚ್ಚಿಬೀಳಿಸಿದೆ.
ಈಗಾಗಲೇ ಧಾರವಾಡ ಜಿಲ್ಲೆಯ ಕರೋನಾ ಸೋಂಕಿತರ ಸಂಖ್ಯೆ 668ಕ್ಕೆ ಏರಿದ್ದು, ಪ್ರತಿ ನಿತ್ಯ 50 ರ ಸಮೀಪ ಸೋಂಕಿತರು ಕಂಡು ಬರುತ್ತಿದ್ದು, ಇದು ಎಲ್ಲಿಗೆ ಹೋಗಿ ತಲುಪುತ್ತದೆ ಎಂಬುದು ಕಾದು ನೋಡಬೇಕಿದೆ.