ಜಿಲ್ಲೆ

ಮಾ.26 ರಂದು ಜಿಲ್ಲಾಧಿಕಾರಿಗಳಿಂದ ನವಲಗುಂದ ತಾಲೂಕಿನ ಹೆಬ್ಬಾಳ, ಬಳ್ಳೂರದಲ್ಲಿ ಪಿಂಚಣಿ ಅದಾಲತ್

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ 

ಧಾರವಾಡ prajakiran.com : ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಹಮ್ಮಿಕೊಂಡಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ನಾಳೆ (ಮಾರ್ಚ್ 26) ಮಧ್ಯಾಹ್ನ ನವಲಗುಂದ ತಾಲೂಕಿನ ಹೆಬ್ಬಾಳ ಮತ್ತು ಬಳ್ಳೂರು ಗ್ರಾಮಗಳಿಗೆ ಸೀಮಿತವಾಗಿ ಈ ಗ್ರಾಮಗಳಲ್ಲಿ ಪಿಂಚಣಿ, ಕಂದಾಯ ಅದಾಲತ್ ಮತ್ತು ಜನಸಂಪರ್ಕ ಸಭೆಗಳನ್ನು ಆಯೋಜಿಸಿದ್ದಾರೆ.

ಮಾ.26 ರಂದು ಮಧ್ಯಾಹ್ನ 3 ಗಂಟೆಗೆ ಹೆಬ್ಬಾಳ ಗ್ರಾಮಕ್ಕೆ ಆಗಮಿಸುವ ಜಿಲ್ಲಾಧಿಕಾರಿಗಳು ಗ್ರಾಮದ ಸಿದ್ಧಾರೂಢ ಮಠದಲ್ಲಿ ಪಿಂಚಣಿ, ಕಂದಾಯ ಅದಾಲತ್ ಮತ್ತು ಜನಸಂಪರ್ಕ ಸಭೆ ಜರುಗಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಇತ್ಯರ್ಥಗೊಳಿಸಲಿದ್ದಾರೆ.

ನಂತರ ಅವರು ಸಂಜೆ 4 ಗಂಟೆಗೆ ಬಳ್ಳೂರು ಗ್ರಾಮಕ್ಕೆ ಆಗಮಿಸಿ ಗ್ರಾಮದ ಸಿದ್ಧಾರೂಢ ದೇವಸ್ಥಾನದಲ್ಲಿ ಅದಾಲತ್ ಜರುಗಿಸಿ ಗ್ರಾಮಸ್ಥರಿಂದ ಕುಂದು ಕೊರತೆಗಳನ್ನು ಸ್ವೀಕರಿಸಲಿದ್ದಾರೆ.

ಜಿಲ್ಲಾಧಿಕಾರಿಗಳ ಈ ಕಾರ್ಯಕ್ರಮದ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಡಾ: ಗೋಪಾಲಕೃಷ್ಣ ಬಿ., ತಹಶೀಲ್ದಾರ ನವೀನ ಹುಲ್ಲೂರ, ಭೂ ದಾಖಲೆಗಳ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್ ಎ.ಪಿ., ನವಲಗುಂದ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು, ಕಂದಾಯ ನಿರೀಕ್ಷಕ, ಪಿಡಿಓ, ಗ್ರಾಮಲೆಕ್ಕಾಧಿಕಾರಿ ಭಾಗವಹಿಸಲಿದ್ದಾರೆ.

ಆದ್ದರಿಂದ ಹೆಬ್ಬಾಳ ಮತ್ತು ಬಳ್ಳೂರು ಗ್ರಾಮಗಳಿಗೆ ಸೀಮಿತವಾಗಿ ಸಾರ್ವಜನಿಕರು ಭಾಗವಹಿಸಿ ಈ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *