ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಬೇರೆ ಜಿಲ್ಲೆಗಳ ಪ್ರಯಾಣಿಕರು ತಂಗುವಂತಿಲ್ಲ: ಜಿಲ್ಲಾಧಿಕಾರಿ ಸೂಚನೆ

ಧಾರವಾಡ prajakiran.com : ಕೋವಿಡ್ ನಿಯಂತ್ರಣಕ್ಕಾಗಿ ಧಾರವಾಡ ಜಿಲ್ಲೆಯಲ್ಲಿ ಜುಲೈ ೧೫ ರ ಬೆಳಿಗ್ಗೆ ೧೦ ಗಂಟೆಯಿಂದ ಜುಲೈ ೨೪ ರವರೆಗೆ ಲಾಕ್‌ಡೌನ್ ಜಾರಿಗೊಳಿಸಿರುವುದರಿಂದ ಈ ಅವಧಿಯಲ್ಲಿ ಸರಕು ಸಾಗಣೆ ಹೊರತುಪಡಿಸಿ , ಯಾವುದೇ ಸಾರಿಗೆ ಸಂಚಾರಕ್ಕೆ ಅವಕಾಶ ಇರುವುದಿಲ್ಲ.

ಜಿಲ್ಲೆಯ ಮಾರ್ಗವಾಗಿ ಅನ್ಯಜಿಲ್ಲೆಗಳು ಮತ್ತು ಸ್ಥಳಗಳಿಗೆ ತೆರಳುವ ಸಾರಿಗೆ ಸಂಸ್ಥೆ ಬಸ್ಸುಗಳು ಮತ್ತು ಇತರ ವಾಹನಗಳು ಧಾರವಾಡ ಜಿಲ್ಲೆಗೆ  ಪ್ರಯಾಣಿಕರನ್ನು ಕರೆತರಬಾರದು.

ಜಿಲ್ಲೆಯ ಯಾವುದೇ ಸ್ಥಳದಲ್ಲಿ ಅಂತಹ ವಾಹನಗಳ ನಿಲುಗಡೆ ಮತ್ತು ಪ್ರಯಾಣಿಕರನ್ನು ಇಳಿಸಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ ಕೆ.ಪಾಟೀಲ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಈ ಕುರಿತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಲಾಕ್‌ಡೌನ್ ಜಿಲ್ಲೆಗೆ ಮಾತ್ರ ಸೀಮಿತವಾಗಿರುವದರಿಂದ ಸಾರಿಗೆ ವಾಹನಗಳ ಸಂಚಾರದ ಬಗ್ಗೆ ವಿಶೇಷ ಗಮನ ನೀಡಬೇಕಾಗಿದೆ.

 ಧಾರವಾಡ ಜಿಲ್ಲೆಯ ಮಾರ್ಗವಾಗಿ ಬೇರೆ ಜಿಲ್ಲೆಗಳಿಗೆ ತೆರಳುವ ಸಾರಿಗೆ ವಾಹನಗಳು ಜಿಲ್ಲೆಯ ಯಾವುದೇ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನಿಲುಗಡೆ ಮಾಡಬಾರದು.

ಬೈ ಪಾಸ್ ರಸ್ತೆಗಳ ಮೂಲಕ ಸಂಚರಿಸಬಹುದು. ಜಿಲ್ಲೆಗೆ ಪ್ರಯಾಣಿಕರನ್ನು ಕರೆತರಲು ಅವಕಾಶವಿಲ್ಲ.

ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ನಿಗಮಗಳು,ವಿಭಾಗಗಳಿಗೆ ನೆರೆಯ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಹುಬ್ಬಳ್ಳಿ ಧಾರವಾಡ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಅಪ್ಪಯ್ಯ ನಾಲತ್ವಾಡಮಠ ಹಾಗೂ ಸಿ.ಡಿ.ನಾಯಕ್ ಇದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *