ರಾಜ್ಯ

ಧಾರವಾಡದಲ್ಲಿ ಲಾಕ್‌ಡೌನ ನಿಯಮ ಪಾಲಿಸದ ವ್ಯಕ್ತಿಗಳ ಮೇಲೆ ಜಲಫಿರಂಗಿ….!

ಧಾರವಾಡ prajakiran.com  :  ಕೊರೊನಾ ನಿಯಂತ್ರಿಸಲು ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಅಗತ್ಯವಾಗಿದೆ.

ಈ ಪ್ರಾಥಮಿಕ ನಿಯಮಗಳನ್ನು ಪಾಲಿಸದೇ ಹೊರಗಡೆ ಅನಗತ್ಯವಾಗಿ ತಿರುಗಾಡುವವರ ಮೇಲೆ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ವಾಹನಗಳ ಮೂಲಕ ಜಲಫಿರಂಗಿ ಸಿಂಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

 ಸಾರ್ವಜನಿಕರಿಗೆ ಈ ಕುರಿತು ಮಾಹಿತಿ ನೀಡಿರುವ ಅವರು ಪ್ರತಿಯೊಬ್ಬ ನಾಗರಿಕನು ಜವಾಬ್ದಾರಿಯನ್ನು ಅರಿತುಕೊಳ್ಳಬೇಕು.

ಜಿಲ್ಲೆಯಾದ್ಯಂತ ಜುಲೈ ೨೪ ರ ವರೆಗೆ ಲಾಕ್‌ಡೌನ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅನೇಕ ಅಚ್ಚರಿಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿವೆ.

ಕೊರೊನಾ ನಿಯಂತ್ರಣ ಎಲ್ಲರ ಹೊಣೆಯಾಗಿದೆ. ಈ ವೈರಾಣುವಿನ ವಿರುದ್ಧ ಹೋರಾಟದಲ್ಲಿ ನಾವೆಲ್ಲರೂ ಸೇನಾನಿಗಳಾಗಬೇಕಾಗಿದೆ.

ಜಿಲ್ಲಾಡಳಿತದ ನಿರ್ದೇಶನ ಉಲ್ಲಂಘಿಸಿ ಹೊರಗಡೆ ಅನಗತ್ಯವಾಗಿ ಸಂಚರಿಸಿದರೆ ಅಂತಹವರ ಮೇಲೆ ಜಲಫಿರಂಗಿ ಎರಚಲಾಗುವುದು.

ಇದು ಅಪಾಯಕಾರಿ ಅಲ್ಲವಾದರೂ ಇಂತಹ ಕ್ರಮಕ್ಕೆ ಜನರು ಅವಕಾಶ ನೀಡದ ರೀತಿಯಲ್ಲಿ ವರ್ತಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *