ರಾಜ್ಯ

ಧಾರವಾಡದ ಬೆಣ್ಣಿಹಳ್ಳದ ಪ್ರವಾಹಕ್ಕೆ‌ ಸಿಲುಕಿದ ಐವರು

ಧಾರವಾಡ prajakiran.com : ಬೆಣ್ಣಿಹಳ್ಳದ ಪ್ರವಾಹಕ್ಕೆ‌ ಐವರು  ಸಿಲುಕಿದ ಘಟನೆ ಧಾರವಾಡ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ನವಲಗುಂದ ತಾಲೂಕಿನ ಸೊಟಕನಾಳ ಬಳಿ ಪ್ರವಾಹ ಸಂಭವಿಸಿದ್ದರಿಂದ ಈ ಅನಾಹುತ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಸೊಟಕನಾಳ ಗ್ರಾಮದ ಬಳಿಯಿರುವ ಬೆಣ್ಣೆಹಳ್ಳದಲ್ಲಿ ಐವರು ಸಿಲುಕಿಕೊಂಡಿದ್ದಾರೆ.

ರಾತ್ರಿಯಿಡಿ ನೀರಿನ ಮಧ್ಯೆಯೇ ಕಳೆದಿರುವ ಐವರು, ನಿನ್ನೆ ಜಮೀನಿಗೆ ಹೋದಾಗ ಸುತ್ತುವರೆದಿರುವ ಬೆಣ್ಣಿಹಳ್ಳದ ನೀರಿನಿಂದ ಕಂಗಲಾಗಿದ್ದಾರೆ.

ಕಲ್ಲಪ್ಪಹಡಪದ, ನವೀನ ಹಡಪದ, ರವಿ, ಚನ್ನವ್ವ ಮತ್ತು ಶೇಖವ್ವ ಪ್ರವಾಹಕ್ಕೆ ಸಿಲುಕಿದವರು ಎಂದು ಗುರುತಿಸಲಾಗಿದೆ.

ನಿನ್ನೆಯಿಂದ ನೀರಿನ ಮಧ್ಯೆಯೇ ಲಾಕ್ ಆಗಿರುವ ಐವರು ರಾತ್ರಿಯಿಡಿ ಕೂಗಿ ಕೂಗಿ ಜನರನ್ನು ಕರೆದಿದ್ದಾರೆ.

ಐವರ ಧ್ವನಿ ಕೇಳಿ ಜಮೀನಿನತ್ತ ಧಾವಿಸಿದ ಜನತೆ ಬೆಳಗ್ಗೆ ಧ್ವನಿ ಕೇಳಿ ವಿಷಯ ತಿಳಿದ ಸ್ಥಳೀಯರು ಪೊಲೀಸರಿಗೆ ಹಾಗೂ ಜಿಲ್ಲಾಡಳಿತಕ್ಕೆ ಮಾಹಿತಿ ರವಾನಿಸಿದ್ದಾರೆ

ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹಾಗೂ ನವಲಗುಂದ ತಾಲೂಕು ಆಡಳಿತ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *