ಧಾರವಾಡ prajakiran.com : ಧಾರವಾಡ ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶುವೊಂದು ಸಾವನ್ನಪ್ಪಿದ್ದ ಆರೋಪ ಕೇಳಿಬಂದಿದೆ.
ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಮೃತಪಟ್ಟಿದೆ ಎಂದು ಆರೋಪಿಸಿ ಧಾರವಾಡ ಜಿಲ್ಲಾ ಆಸ್ಪತ್ರೆಯ ವೈದ್ಯರ ವಿರುದ್ಧ ಜಿಲ್ಲಾಸ್ಪತ್ರೆ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ತನ್ನ ಪತ್ನಿ ಹೆರಿಗೆ ಸಮಯದಲ್ಲಿ ಜಿಲ್ಲಾಸ್ಪತ್ರೆಯ ವೈದ್ಯರು ಬೇಜಾವಾಬ್ದಾರಿತನ ಮೆರೆದಿದ್ದಾರೆ ಎಂದು ಆಕೆಯ ಪತಿ ಗಂಭೀರ ಆರೋಪ ಮಾಡಿದ್ದಾರೆ. ಇದರಿಂದಾಗಿ ಧಾರವಾಡ ಜಿಲ್ಲೆಯ ಮುಗದ ಗ್ರಾಮದ ಮಹಿಳೆ ಪೂಜಾ ಪೂಜಾರಿಗೆ ಅನ್ಯಾಯವಾಗಿದೆ ಎಂದು ದೂರಿದ್ದಾರೆ.
ನಿನ್ನೆ ತಡ ರಾತ್ರಿ ಹಳಿಯಾಳದಿಂದ ಧಾರವಾಡ ಜಿಲ್ಲಾಸ್ಪತ್ರೆಗೆ ಗರ್ಭಿಣಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಮಹಿಳೆಯನ್ನು ದಾಖಲು ಮಾಡಿಕೊಂಡ ಸಮಯಕ್ಕೆ ವೈದ್ಯರು ಬೇಜಾವಾಬ್ದಾರಿತನ ಮೆರೆದಿದ್ದಾರೆಂದು ಗರ್ಭಿಣಿ ಪತಿ ಸಂಜು ಪೂಜಾರ ಆರೋಪ ಮಾಡಿದ್ದಾರೆ.
ಆಸ್ಪತ್ರೆಯಲ್ಲಿರುವ ಅವ್ಯವಸ್ಥೆಯಿಂದಾಗಿ ಮಗು ಸಾವನ್ನಪ್ಪಿದೆ. ಹೆರಿಗೆ ಸಮಯ ವೈದ್ಯರು ಸರಿಯಾಗಿ ಸ್ಪಂದನೆ ನೀಡಿಲ್ಲ ಎಂದು ಮಹಿಳೆಯ ಪತಿ ಹಾಗೂ ಹಲವು ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ನಿರ್ಲಕ್ಷ್ಯ ವಹಿಸಿರುವ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಇನ್ನೂ ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಶಿವಕುಮಾರ ಮಾನಕರ, ಆಸ್ಪತ್ರೆ ವೈದ್ಯರು ನಿರ್ಲಕ್ಷ್ಯ ವಹಿಸಿಲ್ಲಾ. ಗರ್ಭಿಣಿ ಮಹಿಳೆಗೆ ಒಂಬತ್ತು ತಿಂಗಳು ತುಂಬಿರಲಿಲ್ಲಾ ಎಂದು ಸ್ಪಷ್ಟೀಕರಣ ನೀಡಿದ್ದಾರೆ.