ಧಾರವಾಡ prajakiran.com : ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೋಬ್ಬನನ್ನು ಕೊಲೆ ಮಾಡಿದ ಪ್ರಕರಣ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದೆ.
ನರೇಂದ್ರ ಗ್ರಾಮದ ಪೀರಸಾಬ ಹುಸೇನಸಾಬ ನದಾಫ್ (೩೬) ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದಾನೆ.
ಇತನನ್ನು ಅದೇ ಗ್ರಾಮದ ಸೋಮಯ್ಯ ಈರಯ್ಯ ಪೂಜಾರ ಎಂಬುವನೇ ಕೊಲೆಗೈದ ಆರೋಪಿಯಾಗಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.
ಕೊಲೆಯಾಗಿರುವ ಪೀರಸಾಬ ನದಾಫ್ ಕಳೆದ ದಿ.೨೭ ರಂದು ಮನೆಯಿಂದ ಹೊರಗೆ ಹೋದವನು ನಾಪತ್ತೆಯಾಗಿದ್ದ.
ಬಳಿಕ ಆತನ ತಾಯಿ ರೋಷನ್ಬೀ ತನ್ನಮಗ ನಾಪತ್ತೆಯಾಗಿದ್ದಾನೆ ಎಂದು ಕಳೆದ ಸೆ.೨ ರಂದು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.
ದೂರು ದಾಖಲಿಸಿಕೊಂಡ ಧಾರವಾಡ ಗ್ರಾಮೀಣ ಪೊಲೀಸರು ಪ್ರಕರಣದ ಜಾಡು ಹಿಡಿದು ಹೊರಟಾಗ ಪೀರಸಾಬ ನದಾಫ್ನ ಕೊಲೆಯಾಗಿರುವುದು ಗೊತ್ತಾಗಿದೆ.
ಆರೋಪಿ ಸೋಮಯ್ಯ ಪೂಜಾರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪೀರಸಾಬನನ್ನು ಕೊಲೆ ಮಾಡಿ, ಆತನ ಶವವನ್ನು ಕಿತ್ತೂರ ಬಳಿಯ ಮಲಪ್ರಭಾ ನದಿಯಲ್ಲಿ ಎಸೆದಿರುವುದಾಗಿ ಬಾಯಿ ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೀರಸಾಬ ತಾಯಿ ರೋಷನ್ ಬೀ ತನ್ನ ಸೋಸೆಯ ವಿರುದ್ದಅನುಮಾನ ವ್ಯಕ್ತಪಡಿಸಿ ಆಕೆಯ ದೂರು ನೀಡಿದ್ದಾರೆ.
ಇದೀಗ ಧಾರವಾಡ ಗ್ರಾಮೀಣ ಪೊಲೀಸರು ಇಬ್ಬರನ್ನು ಕರೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಧಾರವಾಡ ಗ್ರಾಮೀಣ ಸಿಪಿಐ ಎಸ್.ಬಿ.ಪಾಟೀಲ ಮತ್ತು ಸಿಬ್ಬಂದಿ ಮುಂದಿನ ತನಿಖೆ ನಡೆಸುತ್ತಿದ್ದಾರೆ. ಆದರೆ ಈವರೆಗೆ ಪೀರಸಾಬನ ಶವ ಪೊಲೀಸರಿಗೆ ದೊರೆಯದಿರುವುದು ತಲೆ ನೋವಾಗಿದೆ.