ಧಾರವಾಡ prajakiran.com : ಧಾರವಾಡದ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬಡಾವಣೆಯೊಂದರಲ್ಲಿ ಎಂಟು ವರ್ಷದ ಬಾಲಕಿ ಮೇಲೆ ದೌರ್ಜನ್ಯ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಬಾಲಕಿಯನ್ನು ಮೊಬೈಲ್ ಕೊಟ್ಟ ಹಾಗೆ ಮಾಡಿ ಪುಸಲಾಯಿಸಿ, ಮನೆಗೆ ಕರೆದುಕೊಂಡು ಹೋಗಿ ದೌರ್ಜನ್ಯವೆಸಗಿದ್ದಾನೆ.
ಅಲ್ಲದೆ, ಪೋಷಕರಿಗೆ ವಿಷಯ ತಿಳಿಸದಂತೆ ಜೀವ ಬೆದರಿಕೆ ಒಡ್ಡಿದ್ದ ಎಂದು ಆಕೆಯ ಪೋಷಕರು ದೂರಿನಲ್ಲಿ ಆರೋಪಿಸಿದ್ದಾರೆ.
ಆರೋಪಿ ಶಂಕರ್ ವಿರುದ್ದ ಕಲಂ 342, 376, 506 ಐಪಿಸಿ ಹಾಗೂ ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಧಾರವಾಡ ಶಹರ ಠಾಣೆ ಪೊಲೀಸರು ಆರೋಪಿಯ ಹೆಡೆ ಮುರಿ ಕಟ್ಟಿ, ತನಿಖೆ ಮುಂದುವರೆಸಿದ್ದಾರೆ.
ಧಾರವಾಡ ಶಹರ ಠಾಣೆ ಪೊಲೀಸರು ಆರೋಪಿ ಶಂಕರ ಪರಶುರಾಮ ಗೊಲ್ಲರನನ್ನು (25) ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಪ್ರಜಾಕಿರಣ.ಕಾಮ್ ಗೆ ತಿಳಿಸಿವೆ.