ಅಪರಾಧ

ಧಾರವಾಡದ ಗರಗದಲ್ಲಿ ಈಜಲು ಹೋಗಿ ನೀರು ಪಾಲಾದ ಇಬ್ಬರು ಬಾಲಕರು

ಧಾರವಾಡ prajakiran.com : ಕೆರೆಯಲ್ಲಿ ಈಜಲು ಹೋದ ಬಾಲಕರಿಬ್ಬರು  ಈಜು ಬಾರದೆ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಧಾರವಾಡದಲ್ಲಿ ಸೋಮವಾರ ನಡೆದಿದೆ.

 ತಾಲೂಕಿನ  ಗರಗ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಇದರಿಂದಾಗಿ

ಆದಿನಾಥ್ ಸಂಗೊಳ್ಳಿ (13) ಹಾಗೂ ಸುಭಾಷ ಸಂಗೊಳ್ಳಿ (13) ಎಂಬ ಬಾಲಕರೇ ಸಾವನ್ನಪ್ಪಿದ್ದ ಬಾಲಕರಾಗಿದ್ದಾರೆ.

ಗರಗ ಗ್ರಾಮದ ಮಂಗಳಗಟ್ಟಿ ರಸ್ತೆಯಲ್ಲಿ ಇರುವ ಕೆರೆಯಲ್ಲಿ ಈಜಲು ಹೋಗಿದ್ದ ಈ ಬಾಲಕರು ಈಜು ಬರದೇ ಸಾವನ್ನಪ್ಪಿದ್ದಾರೆ ಎಂದು ಗರಗ ಪೊಲೀಸರು ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ.

ತಕ್ಷಣ ನೋಡಿದ ಸ್ಥಳೀಯರು ಇಬ್ಬರೂ ಬಾಲಕರನ್ನೂ ಗರಗ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋದರಾದರೂ ಮಾರ್ಗ ಮಧ್ಯೆಯೇ ಬಾಲಕರ ಪ್ರಾಣ ಪಕ್ಷಿ ಹಾರಿಹೋಗಿತ್ತು ಎಂದು ವಿವರಿಸಿದ್ದಾರೆ.

ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *