ಧಾರವಾಡ prajakiran.com : ದೇವಸ್ಥಾನದಲ್ಲಿನ ವಿಗ್ರಹಕ್ಕೆ ಹಾಕಿದ್ದ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಲು ವಿಫಲ ಯತ್ನ ನಡೆಸಿದ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಹೊಸಯಲ್ಲಾಪೂರ ದ್ಯಾಮವ್ವನ ಗುಡಿ ಓಣಿಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಇದು ಸ್ಥಳೀಯರಿಗೆ ಹಾಗೂ ಗ್ರಾಮದೇವಿ ಸದ್ಭಕ್ತರಿಗೆ ಆತಂಕ ಮೂಡಿಸಿದೆ.
ದ್ಯಾಮವ್ವನ ಗುಡಿ ಓಣಿಯಲ್ಲಿನ ಗ್ರಾಮ ದೇವಿಯ ದೇವಸ್ಥಾನದ ಬಾಗಿಲಿನ ಕೀಲಿ ಮುರಿದು, ವಿಗ್ರಹಕ್ಕೆ ಹಾಕಿದ್ದ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಲು ಯತ್ನಿಸಲಾಗಿದೆ.
ಆದರೆ ಯಾವುದೇ ನಗ, ನಾಣ್ಯ ಹಾಗೂ ಚಿನ್ನಾಭರಣ ಕಳ್ಳತನ ನಡೆದಿಲ್ಲ ಎಂದು ಧಾರವಾಡ ಶಹರ ಪೊಲೀಸ್ ಠಾಣೆ ಪೊಲೀಸರು ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ.
ಗ್ರಾಮದೇವಿ ದೇವಸ್ಥಾನಕ್ಕೆ ಕನ್ನ ಹಾಕಲು ಯತ್ನಿಸಿದ ಖದೀಮರ ವಿರುದ್ದ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಹಿತಿ ಅರಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಶಹರ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀಧರ ಸತಾರೆ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.