ಜಿಲ್ಲೆ

ಧಾರವಾಡದಲ್ಲಿ ಜೀವ ಅಂಗೈಯಲ್ಲಿ ಹಿಡಿದು ಜೀವನ ನಡೆಸುತ್ತಿರುವ ನಿವಾಸಿಗಳು

ಧಾರವಾಡ prajakiran.com : ಅನೇಕರು ತಮ್ಮ ಜೀವವನ್ನು ಅಂಗೈಯಲ್ಲಿ ಹಿಡಿದು ಜೀವನ ನಡೆಸುತ್ತಿರುವ ಘಟನೆ ಧಾರವಾಡದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಮೈಮೇಲೆ ವಿದ್ಯುತ್ ತಂತಿ ಹರಿದು ಬೀಳುವ ಆತಂಕ ಎದುರಾಗಿದ್ದರೂ ಹೆಸ್ಕಾಂ ಮಾತ್ರ ಜಾಣ ಕುರುಡುತನ ತೋರಿಸುತ್ತಿದೆ.

ಧಾರವಾಡದ ಎತ್ತಿನಗುಡ್ಡ ರಸ್ತೆ ಹಾಶ್ಮೀನಗರದ 1 st cross ನಿವಾಸಿಗಳ ಸಮಸ್ಯೆಹೇಳತೀರದಾಗಿದೆ.

ಈ ಹಿನ್ನಲೆಯಲ್ಲಿ ವಿದ್ಯುತ್ ತಂತಿಗಳು ಹಾಗೂ ವಿದ್ಯುತ ಕಂಬ ಸರಿಪಡಿಸುವಂತೆ ನಿವಾಸಿಗಳು ಒತ್ತಾಯ ಮಾಡಿದ್ದಾರೆ.

ಕಳೆದ 7 ತಿಂಗಳಿಂದ ಹೆಸ್ಕಾಂ ಅಧಿಕಾರಿಗಳಿಗೆ ಈ ಬಗ್ಗೆ ಮನವಿ ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ.

ಮನೆ ಮುಂದೆ ಜೋತು ಬಿದ್ದಿರುವ ವಿದ್ಯುತ್ ತಂತಿಗಳು, ಯಾವಾಗಲಾದ್ರೂ ಬೀಳುವ ಸ್ಥಿತಿಯಲ್ಲಿರುವ ಕಂಬಗಳಿಂದ ಬೆಸತ್ತು ಹೋಗಿದ್ದಾರೆ.

ಈ ಬಗ್ಗೆ ಮೌನವಹಿಸಿರುವ ಜನಪ್ರತಿನಿಧಿಗಳ ವಿರುದ್ದವೂ ಹಿಡಿಶಾಪ ಹಾಕುತ್ತಿದ್ದಾರೆ. ಈಗಲಾದರೂ ಹೆಸ್ಕಾಂ ಅಧಿಕಾರಿಗಳು ಪ್ರಾಮಾಣಿಕವಾಗಿ ಸ್ಪಂದಿಸುತ್ತಾ ಕಾದುನೋಡಬೇಕಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *