ರಾಜ್ಯ

ಧಾರವಾಡದ ಹಿರೇಕೆರೆಯಲ್ಲಿ ತೇಲಿ ಹೋಗಿದ್ದ ಬಾಲಕಿ ಮೃತ ದೇಹ ಪತ್ತೆ

ಧಾರವಾಡ prajakiran.com : ಧಾರವಾಡಜಿಲ್ಲೆಯ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ  ಹಿರೇಕೆರೆ ನೀರಿನ ಸೆಳವಿನಲ್ಲಿ ತೇಲಿ ಹೋಗಿದ್ದ, 8 ವರ್ಷದ ಬಾಲಕಿ ಶ್ರೀದೇವಿ ಹನುಮಂತಪ್ಪ ಗಾಣಿಗೇರ ಅವರ ಮೃತದೇಹ ಇದೀಗ ತೇಲಿ ಹೋದ ಸ್ಥಳದ ಸುಮಾರು ಒಂದೂವರೆ ಕಿ.ಮೀ.ಅಂತರದಲ್ಲಿ ಪತ್ತೆಯಾಗಿದೆ.

ಅಗಸ್ಟ್ 6 ರಂದು ಈ ಬಾಲಕಿ ನೀರಿನ ಸೆಳವಿಗೆ ಸಿಕ್ಕು ತೇಲಿ ಹೋಗಿದ್ದಳು.ಅಂದಿನಿಂದ ನಿರಂತರವಾಗಿ ಎನ್ ಡಿ ಆರ್ ಎಫ್ ಹಾಗೂ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಹಗಲು-ರಾತ್ರಿ ಕಾರ್ಯಾಚರಣೆ ನಡೆಸಿದ್ದರು.

ಬಾಲಕಿಯ ದೇಹ ಪತ್ತೆಯಾಗಿದ್ದು ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

ಬಾಲಕಿಯ ಕುಟುಂಬಕ್ಕೆ ಶೀಘ್ರವೇ ಪರಿಹಾರ ವಿತರಣೆಗೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ನಿತೇಶ ಪಾಟೀಲ ತಿಳಿಸಿದ್ದಾರೆ.

*ಆತುರದ ನಿರ್ಧಾರ ಬೇಡ*

ಮಳೆಗಾಲದ ಸಂದರ್ಭದಲ್ಲಿ ಸಾರ್ವಜನಿಕರು , ಗ್ರಾಮೀಣ ಭಾಗದ ನಿವಾಸಿಗಳು ತುಂಬಿ ಹರಿಯುವ ಹಳ್ಳ,ಕೊಳ್ಳಗಳನ್ನು ರಭಸದ ಸಂದರ್ಭದಲ್ಲಿ ದಾಟಲು ಆತುರ ಪಡಬಾರದು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

 ನೀರು ಇಳಿಮುಖವಾಗುವವರೆಗೂ ತಾಳ್ಮೆಯಿಂದ ಇರಬೇಕು, ಸ್ಥಳೀಯ ಸ್ವಯಂ ಸೇವಕರು, ಅತಿವೃಷ್ಟಿ ನಿರ್ವಹಣಾ ಸಿಬ್ಬಂದಿಯ ನೆರವು ಪಡೆಯಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *