ರಾಜ್ಯ

ಧಾರವಾಡದಲ್ಲಿ ಕುಸಿದ ಮನೆ, ಅಳ್ನಾವರದಲ್ಲಿ ಹಾನಿ ಪರಿಶೀಲಿಸಿದ ಕೇಂದ್ರ ತಂಡ

ಧಾರವಾಡ prajakiran.com : ಅತಿವೃಷ್ಟಿ ಅಧ್ಯಯನಕ್ಕೆ ಆಗಮಿಸಿರುವ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳ ತಂಡವು ಅಳ್ನಾವರ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿ ಹಾನಿ ಹಾನಿ ಪರಿಶೀಲನೆ ನಡೆಸಿತು.

ಕೇಂದ್ರ ಕೃಷಿ ಹಾಗೂ ರೈತರ ಸಹಕಾರ ಮಾರುಕಟ್ಟೆ ಮಂತ್ರಾಲಯದ ಎಣ್ಣೆಬೀಜ ಅಭಿವೃದ್ಧಿ ನಿರ್ದೇಶಕ ಡಾ.ಮನೋಹರನ್, ಕೇಂದ್ರ ಜಲಶಕ್ತಿ ಮಂತ್ರಾಲಯದ ಅಧೀಕ್ಷಕ ಇಂಜಿನಿಯರ್ ಗುರುಪ್ರಸಾದ್ .ಜೆ. ಅವರನ್ನೊಳಗೊಂಡ ತಂಡವು ಹುಲಿಕೆರೆ ಗ್ರಾಮದ ಇಂದಿರಮ್ಮನ ಕೆರೆಗೆ ಭೇಟಿ ನೀಡಿ ಇತ್ತೀಚೆಗೆ ಸುರಿದ ಮಳೆಯಿಂದ ಆಗಿರುವ ಹಾನಿ ಹಾಗೂ ಕಳೆದ ವರ್ಷ ಉಂಟಾಗಿದ್ದ ಪರಿಸ್ಥಿತಿಯ ಮಾಹಿತಿ ಪಡೆದರು.

ಸುಮಾರು ೨.೩ ಚ.ಕಿ.ಮೀ. ವಿಸ್ತೀರ್ಣದ ಈ ಕೆರೆಯು ಅಳ್ನಾವರ ಪಟ್ಟಣಕ್ಕೆ ಕುಡಿಯುವ ನೀರು ಹಾಗೂ ಸುಮಾರು ೧೦೯೯ ಹೆಕ್ಟೇರ್ ಅಚ್ಚುಕಟ್ಟು ಪ್ರದೇಶ ಹೊಂದಿದೆ. ಪ್ರತಿವರ್ಷ ಮಳೆಯಿಂದ ಉಂಟಾಗುವ ಹಾನಿ ತಪ್ಪಿಸಲು ೪.೫ ಕೋಟಿ ರೂ. ಮೊತ್ತ ಅಂದಾಜು ವೆಚ್ಚದ ಕಾಮಗಾರಿಯನ್ನು ರೂಪಿಸಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಕೇಂದ್ರ ತಂಡಕ್ಕೆ ಮಾಹಿತಿ ನೀಡಿದರು.

ಅಳ್ನಾವರದ ಡೌಗಿನಾಲಾ ಕೊಚ್ಚಿ ಹೋಗಿ ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿದು ಹೋಗುತ್ತಿರುವುದು.

ಅರವಟಗಿಯ ಪಶು ವೈದ್ಯ ಚಿಕಿತ್ಸಾಲಯ ಸಂಪೂರ್ಣ ಬಿದ್ದು ಹೋಗಿರುವುದನ್ನು ಕೇಂದ್ರ ಪ್ರವಾಹ ಅಧ್ಯಯನ ತಂಡದ ಅಧಿಕಾರಿಗಳು ಖುದ್ದಾಗಿ ವೀಕ್ಷಿಸಿದರು.

ಬಳಿಕ ಧಾರವಾಡದ ಮಾಳಾಪುರದಲ್ಲಿ ಕುಸಿದಿರುವ ಫಾತಿಮಾ ಮೆಹಬೂಬಸಾಬ ಮುಚಾಲೆ ಅವರ ಮನೆಗೆ ಭೇಟಿ ನೀಡಿ ಹಾನಿ ವೀಕ್ಷಿಸಿತು.

ಜಿಲ್ಲಾಧಿಕಾರಿ ನಿತೇಶ ಕೆ.ಪಾಟೀಲ, ರಾಜ್ಯ ಕಂದಾಯ ಇಲಾಖೆಯ ಕೆಎಸ್‌ಡಿಎಂಎ ವಿಭಾಗೀಯ ವ್ಯವಸ್ಥಾಪಕ ಡಾ.ಜೆ.ಎಸ್. ಶ್ರೀನಿವಾಸರೆಡ್ಡಿ, ಉಪವಿಭಾಗಾಧಿಕಾರಿ ಡಾ. ಗೋಪಾಲಕೃಷ್ಣ, ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಡಾ. ಪರಮೇಶ್ವರ ನಾಯಕ್, ತಹಶೀಲ್ದಾರ ಅಮರೇಶ ಪಮ್ಮಾರ, ಅಳ್ನಾವರ ಪ.ಪಂ.ಮುಖ್ಯಾಧಿಕಾರಿ ವೈ.ಜಿ.ಗದ್ದಿಗೌಡರ್ ಮತ್ತಿತರರು ಇದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *