ಧಾರವಾಡ prajakiran.com : ತಾಯಿ ಸಾವನ್ನಪ್ಪಿದಕ್ಕೆ ಮನನೊಂದ ಮಗನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ಕವಲಗೇರಿ ಗ್ರಾಮದ ಮಹಾಂತೇಶ ಸುಂಕಣ್ಣನವರ (28) ಎಂಬ ಯುವಕನೇ ಆತ್ಮಹತ್ಯೆ ಮಾಡಿಕೊಂಡ ದುದೈವಿ ಎಂದು ತಿಳಿದುಬಂದಿದೆ.
ಐದು ತಿಂಗಳ ಹಿಂದೆಯಷ್ಟೇ ಅವನ ತಾಯಿ ಸಹ ಮರಣ ಹೊಂದಿದ ಹಿನ್ನೆಲೆಯಲ್ಲಿ ಆತ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಕೆಲಸ ಮುಗಿಸಿ ಮನೆಗೆ ಬಂದು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹದಿಹರೆಯದ ಮಗನನ್ನು ಕಳೆದುಕೊಂಡ ಕುಟುಂಬಕ್ಕೆ ದಿಕ್ಕು ತೋಚದ ಸ್ಥಿತಿ ನಿರ್ಮಾಣವಾಗಿದೆ.
ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.