ಕುಂದಗೋಳ Prajakiran.com : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕಟ್ಟಿಕೊಂಡ ಹೆಂಡತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಸಂಶಿ ಗ್ರಾಮದಲ್ಲಿ ನಡೆದಿದೆ.
ನಿನ್ನೆ ರಾತ್ರಿಯಿಂದ ಮನೆಯಲ್ಲಿ ದಂಪತಿಗಳಿಬ್ಬರ ನಡುವೆ ಆರಂಭವಾಗಿದ್ದ ಜಗಳ ಇಂದು ಬೆಳಿಗ್ಗೆ ಅತಿರೇಕಕ್ಕೆ ತಿರಗಿದ್ದು, ಪತಿ ಕಮಲಸಾಬ ಹುಸೇನಸಾಬ ದರಗದ ಎಂಬಾತನೇ ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ.
ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಮಹಿಳೆಯನ್ನು ಕುಂದಗೋಳ ತಾಲೂಕು ಆಸ್ಪತ್ರೆಗೆ ರವಾನಿಸಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಸದ್ಯ ಚಾಕು ಇರಿದ ಪತಿ ಕಮಲಸಾಬ ಹುಸೇನಸಾಬ ದರಗದ ನಾಪತ್ತೆಯಾಗಿದ್ದು ಸ್ಥಳಕ್ಕೆ ಕುಂದಗೋಳ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರೆಸಿದ್ದಾರೆ.