ಧಾರವಾಡ prajakiran.com : ಧಾರವಾಡದ ಸರ್.ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಮೂರು ವರ್ಷದ ಕಾನೂನು ಪದವಿ ಶಿಕ್ಷಣವನ್ನು ಸ್ಥಗಿತಗೊಳಿಸಿದ್ದನ್ನು ಖಂಡಿಸಿ ಹಾಗೂ ತಕ್ಷಣ ಕೋರ್ಸ್ ಆರಂಭಕ್ಕೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಧಾರವಾಡದಲ್ಲಿ ಮಂಗಳವಾರ ಒಂದು ದಿನದ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಅಲ್ಲದೆ, ಸರ್.ಸಿದ್ದಪ್ಪ ಕಂಬಳಿ ಕಾಲೇಜಿನ ಎದುರು ಟೈರ್ ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಕಾನೂನು ಪದವಿ ಬಂದ್ ಮಾಡಿದ್ದನ್ನು ಖಂಡಿಸಿ, ಈಗಾಗಲೇ ಸರ್.ಸಿದ್ದಪ್ಪ ಕಂಬಳಿ ಕಾಲೇಜಿನ ಪ್ರಾಚಾರ್ಯರಿಗೆ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಿಗೆ ನಾಲ್ಕು ಬಾರಿ ಮನವಿ ಸಲ್ಲಿಸಿದರೂ, ಕೋರ್ಸ್ ಆರಂಭಿಸುವ ಬಗ್ಗೆ ಚಿಂತನೆ ನಡೆಸಿಲ್ಲ ಎಂದು ದೂರಿದರು.
ಎಬಿವಿಪಿ ಸಂಘಟನೆ ಮನವಿಗೂ ಸ್ಪಂದಿಸದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಹೋರಾಟದ ಹಾದಿ ತುಳಿಯಬೇಕಾಗಿದೆ ಎಂದರು.
ತಕ್ಷಣವೇ ಎಚ್ಚೆತ್ತುಕೊಂಡು ಕವಿವಿ, ಸರ್.ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಮೂರು ವರ್ಷದ ಕಾನೂನು ಪದವಿ ಆರಂಭಿಸಬೇಕು ಎಂದು ಒತ್ತಾಯಿಸಿದರು.