ಅಪರಾಧ

ಧಾರವಾಡದ ಮಾಳಮಡ್ಡಿಯಲ್ಲಿ ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಮನೆ

ಧಾರವಾಡ Prajakiran.com : ಸ್ಮಿಕ ಬೆಂಕಿ ತಗುಲಿದ ಪರಿಣಾಮ
ಧಾರವಾಡದ ಮಾಳಮಡ್ಡಿಯಲ್ಲಿ ಮನೆಯೊಂದು ಸುಟ್ಟು ಕರಕಲಾದ ಘಟನೆ ಭಾನುವಾರ ನಡೆದಿದೆ.

ಮಹಿಷಿ ಎಂಬುವರಿಗೆ ಸೇರಿದ ಮನೆಯಾಗಿದ್ದು, ಅವರು ಮಧ್ಯಾಹ್ನ ರಾಯರ ಮಠಕ್ಕೆ ಊಟಕ್ಕೆ ಹೋದಾಗ ದುರಂತ ಸಂಭವಿಸಿದೆ.

ಹೀಗಾಗಿ ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಆದರೆ, ಮನೆಯಲ್ಲಿ ಯಾರು ಇಲ್ಲದ ಪರಿಣಾಮ ಮನೆಯಲ್ಲೆಡೆ ಬೆಂಕಿ ಆವರಿಸಿಕೊಂಡಿದೆ.

 

ಇದರಿಂದಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಸ್ಥಳೀಯ ನಿವಾಸಿಗಳು ವಿದ್ಯಾಗಿರಿ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಗೆ ಮಾಹಿತಿ ನೀಡಿದರು.

ಅವರು ಬಂದು ಬೆಂಕಿ ನಂದಿಸಲು ಹರಸಾಹಸ ನಡೆದಿದರು.
ಇದರಿಂದಾಗಿ ಅಕ್ಕ ಪಕ್ಕದ ನಿವಾಸಿಗಳು ಕೆಲ ಕಾಲ ಬೆಚ್ವಿ ಬಿದ್ದಿದ್ದರು.

ಅಲ್ಲದೆ ಬೆಂಕಿಯ ಕೆನ್ನಾಲಿಗೆ ಎಲ್ಲಿ ವಿಸ್ತರಿಸುವದೋ ಎಂದು ಆತಂಕದ ಕಾರ್ಮೋಡ ಕವಿದಿತ್ತು.

ಆದರೆ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂದಿ ನಂದಿಸುವ ಮೂಲಕ ಸ್ಥಳೀಯ ಜನರಿಗೆ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *