ಧಾರವಾಡ prajakiran.com : ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋಬ್ಬ ನೇಣಿಗೆ ಶರಣಾದ ಪ್ರಕರಣ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ.
ಹೆಬ್ಬಳ್ಳಿ ಗ್ರಾಮದ ಶಿವಾನಂದ ಮಲ್ಲಿಕಾರ್ಜುನ ಬಳಗಾನೂರ (೪೫) ನೇಣಿಗೆ ಶರಣಾದ ವ್ಯಕ್ತಿ. ಕಳೆದ ಕೆಲ ದಿನಗಳಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಈತ, ಇಂದು ಮುಂಜಾನೆ ತನ್ನ ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನಾ ಸ್ಥಳಕ್ಕೆ ಪಿಎಸ್ಐ ಸುಮಾ ನಾಯಕ ಭೇಟಿ ನೀಡಿದ್ದರು. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ತನಿಖೆ ಮುಂದುವರೆದಿದೆ.