ನ. 26 ರ ಹೋರಾಟದ ತಾತ್ಕಾಲಿಕವಾಗಿ ಹಿಂದಕ್ಕೆ : ಬಸವರಾಜ ಕೊರವರ
ಧಾರವಾಡ ಪ್ರಜಾಕಿರಣ. ಕಾಮ್ : ಜಿಲ್ಲೆಯ ಕಲಘಟಗಿ ತಾಲೂಕಿನ ಲಿಂಗನಕೊಪ್ಪ ಗ್ರಾಮದ 40ಕ್ಕೂ ಹೆಚ್ಚು ರೈತರಿಗೆ ಕಳೆದ ಐದು ತಿಂಗಳ ಹಾಲಿನ ಬಾಕಿ ಹಣದ ಪೈಕಿ ಒಂದೂವರೆ ಲಕ್ಷ ರೂಪಾಯಿಯನ್ನು
ಧಾರವಾಡ ಹಾಲು ಉತ್ಪಾದಕರ ಒಕ್ಕೂಟ ಕೊನೆಗೂ ಬಿಡುಗಡೆ ಮಾಡಿದೆ.
ಈ ಹಿನ್ನೆಲೆಯಲ್ಲಿ ನ.26ರಂದು ನಡೆಯಬೇಕಿದ್ದ ಪ್ರತಿಭಟನೆ ಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಜನಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಧಾಮುಲ್ ವ್ಯವಸ್ಥಾಪಕ ನಿರ್ದೇಶಕ ಡಾ. ಕೆ.ಎಂ. ಲೋಹಿತೇಶ್ವರ ಅವರು ನಮಗೆ ನೀಡಿದ ಭರವಸೆಯಂತೆ ನಡೆದುಕೊಂಡಿರುವ ಹಿನ್ನೆಲೆಯಲ್ಲಿ ಅವರಿಗೆ
ಲಿಂಗನಕೊಪ್ಪ ಹಾಲು ಉತ್ಪಾದಕರ ಸಂಘದ 40ಕ್ಕೂ ಹೆಚ್ಚು ರೈತರ ಪರವಾಗಿ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದ್ದಾರೆ.
ಅಲ್ಲದೆ, ಇನ್ನುಳಿದ ಬಾಕಿ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಒತ್ತಾಯಿಸಿದ್ದಾರೆ.
ರೈತರ ಇನ್ನುಳಿದ ಬಾಕಿ ಹಣ ಹಣ ಬಿಡುಗಡೆ ಮಾಡದಿದ್ದರೆ ಮತ್ತೆ ಹೋರಾಟದ ಹಾದಿ ಹಿಡಿಯುವುದು ಅನಿವಾರ್ಯ ವಾಗಲಿದೆ ಎಂದು ಜನಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವರ ಎಚ್ಚರಿಸಿದ್ದಾರೆ.
ಅನೇಕ ರೈತರು ಪ್ರತಿನಿತ್ಯ 15 ಲೀಟರ್ ನಿಂದ 30 ಲೀಟರ್ ವರೆಗೆ
ಹಾಲು ಪೂರೈಕೆ ಮಾಡಿದ್ದಾರೆ.
ರೈತರಿಗೆ ಸಕಾಲಕ್ಕೆ ಹಣ ಬಾರದ ಹಿನ್ನೆಲೆಯಲ್ಲಿ ಐದು ತಿಂಗಳಿಂದ ಧಾರವಾಡ ಹಾಲು ಉತ್ಪಾದಕರ ಒಕ್ಕೂಟದ ಕಚೇರಿಗೆ ಅಲೆದಾಡುತ್ತಿದ್ದರು.
ಈ ವಿಷಯವನ್ನು ಲಿಂಗಬಕೊಪ್ಪ ರೈತರ ನಿಯೋಗದೊಂದಿಗೆ ರೈತ ಮುಖಂಡ ಮುತ್ತಣ್ಣ ಶಿವಳ್ಳಿ ಹಾಗೂ ಬಸವರಾಜ ಕೊರವರ ನೇತೃತ್ವದಲ್ಲಿ ಭೇಟಿಯಾಗಿ ಗಡುವು ನೀಡಿದ್ದನ್ನು ಇಲ್ಲಿ ಸ್ಮರಿಸಬಹದು.