ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕರೋನಾ ಉಲ್ಭಣಿಸಿದ್ದರೂ ಜನ ಸಾಮಾಜಿಕಅಂತರ ಮರೆತು, ಮಾಸ್ಕ ಇಲ್ಲದೆ ಓಡಾಡುತ್ತಿರು ಪ್ರಕರಣಗಳು ಹೆಚ್ಚುತ್ತಲೇ ಇವೆ.
ಹೌದು ಇದು ಅಚ್ಚರಿಯಾದ್ರೂ ನಂಬಲೇ ಬೇಕು ಧಾರವಾಡ ಜಿಲ್ಲೆಯಾದ್ಯಂತ ಕಳೆದವಾರ ಲಾಕ್ ಡೌನ್ ಉಲ್ಲಂಘಿಸಿ ಸಂಚರಿಸಿರುವ ಒಟ್ಟು 631 ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವರ್ತಿಕಾ ಕಟಿಯಾರ್ ಅವರು ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ.
ಅಲ್ಲದೆ, ಇದರಿಂದಾಗಿ ಒಟ್ಟು91,400 ರೂಪಾಯಿ ದಂಡ ಸಂಗ್ರಹಿಸಲಾಗಿದೆ. ಜೊತೆಗೆ ಮಾಸ್ಕ ಧರಿಸದಿರುವುದಕ್ಕೆ ಹಾಗೂ ಸಾಮಾಜಿಕ ಅಂತರ ಉಲ್ಲಂಘಿಸಿರುವುದಕ್ಕೆ 949 ಪ್ರಕರಣಗಳನ್ನು ದಾಖಲಿಸಿ, ಒಟ್ಟು 99 ಸಾವಿರ ರೂಪಾಯಿ ದಂಡ ಸಂಗ್ರಹಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಧಾರವಾಡ ಜಿಲ್ಲೆಯ ನವಲಗುಂದ, ಕಲಘಟಗಿ, ಕುಂದಗೋಳ, ಹುಬ್ಬಳ್ಳಿ ಗ್ರಾಮೀಣ ಹಾಗೂ ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗಿತ್ತು.
ಆದರೂ ಜನತೆ ಅನಗತ್ಯವಾಗಿ ಓಡಾಡಿದ್ದಕ್ಕೆ ವಾಹನ ಜಪ್ತಿ ಮಾಡಿ ಪ್ರಕರಣ ದಾಖಲಾಗಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಸ್ಪಷ್ಟಪಡಿಸಿದ್ದಾರೆ.