ರಾಜ್ಯ

ಧಾರವಾಡದ ನಿವೃತ್ತ ಪಿ ಎಸ್ ಐ ಕರೋನಾದಿಂದ ಸಾವು

ಧಾರವಾಡ prajakiran.com : ಧಾರವಾಡದ ಉಪನಗರ ಪೊಲೀಸ್ ಠಾಣೆಯ ನಿವೃತ್ತ ಪಿ ಎಸ್ ಐ ಒಬ್ಬರು ಕರೋನಾದಿಂದ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಧಾರವಾಡದ ಹೊಯ್ಸಳ ನಗರ ನಿವಾಸಿಯಾಗಿದ್ದ ರಮೇಶ ಕಾತರಕಿ ಅವರೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಕಳೆದ ಹದಿನೈದು ದಿನಗಳಿಂದ ಕೋವಿಡ್ ನಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ.

ಇವರು ಈ ಹಿಂದೆ ಧಾರವಾಡ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ಆಗಿದ್ದರು. ಸೇವಾ ಹಿರಿತನದ ಆಧಾರದ ಮೇಲೆ ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಎಎಸ್ ಐ ಆಗಿ ಆನಂತರ ಪಿಎಸ್ ಐ ಆಗಿ ಬಡ್ತಿಯಾಗಿ, ಸೇವಾ ನಿವೃತ್ತಿ ಹೊಂದಿದ್ದರು.

ತಮ್ಮ ಕ್ರಿಯಾಶೀಲತೆ ಹಾಗೂ ಸರಳತೆಯಿಂದಲೇ ಪೊಲೀಸ್ ಇಲಾಖೆಯಲ್ಲಿ ಗುರುತಿಸಿಕೊಂಡಿದ್ದ ರಮೇಶ ಕಾತರಕಿ ಪತ್ನಿ, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಅವರ ನಿಧನಕ್ಕೆ ಪೊಲೀಸ್ ಇಲಾಖೆಯಅನೇಕರು ಕಂಬನಿ ಮಿಡಿದಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಕರೋನಾಕ್ಕೆ ಸಾವನ್ನಪ್ಪಿದ್ದವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವುದು ಕರೋನಾ ಸೇನಾನಿಗಳಿಗೆ ನಡುಕ ಹುಟ್ಟಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *