ಧಾರವಾಡ prajakiran.com : ಧಾರವಾಡದ ಸುಪರ್ ಮಾರ್ಕೆಟ್ ನಲ್ಲಿ ಶನಿವಾರ ಶ್ರೀ ಗಜಾನನ ಉತ್ಸವ ಸಮಿತಿ ಇವರ ವತಿಯಿಂದ ಈ ವರ್ಷ ಸಾರ್ವಜನಿಕ ಗಣೇಶೋತ್ಸವವನ್ನು ಸರಳವಾಗಿ ಆಚರಿಸಲಾಯಿತು.
ಕರೋನಾ ಹಾವಳಿಯಿಂದಾಗಿ ರಾಜ್ಯ ಸರಕಾರದ ಮಾರ್ಗಸೂಚಿಯಂತೆ ಸರ್ವರ ಆರೋಗ್ಯದ ಹಿತದೃಷ್ಟಿಯಿಂದ ಪ್ರತಿ ವರ್ಷದಂತೆ ಅದ್ದೂರಿಯಾಗಿ ಆಚರಿಸದೆ ಶ್ರದ್ದಾ ಭಕ್ತಿಯಿಂದ ನಡೆಯಿತು.
ಅಲ್ಲದೆ, ಮಣ್ಣಿನಿಂದ ಮಾಡಿದ ಪರಿಸರ ಸ್ನೇಹಿ ಗಣೇಶ ವಿಗ್ರಹವನ್ನು ಲಾರಿಯೊಂದರಲ್ಲಿಯೇ ಸುತ್ತಲೂ ಅಲಂಕಾರ ಮಾಡಿ ಪ್ರತಿಷ್ಠಾಪಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮಾರುಕಟ್ಟೆಯ ವ್ಯಾಪಾರಸ್ಥರು, ಸಾರ್ವಜನಿಕರು ಪೂಜಿಸಿದ್ದು ವಿಶೇಷವಾಗಿತ್ತು.
ಪ್ರತಿ ಬಾರಿ ಸತತವಾಗಿ ಎಳು ದಿನಗಳ ಕಾಲ ಪೂಜಿಸಿ ವಿಸರ್ಜನೆ ಮಾಡುತ್ತಿದ್ದ
ಗಣೇಶ ವಿಗ್ರಹವನ್ನು ಈ ಬಾರಿ ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಿದ್ದಾರೆ.
ಶನಿವಾರ ಸಂಜೆ ೭ ಗಂಟೆ ಸುಮಾರಿಗೆ ಮಾರುಕಟ್ಟೆಯಲ್ಲಿಯೇ ಒಂದು ಡ್ರಂನಲ್ಲಿ ವಿಸರ್ಜನೆ ಮಾಡಲಾಗುವುದು ಎಂದು ವರ್ತಕರು ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ.