ಧಾರವಾಡ prajakiran.com : ಯುವಕನಿಂದ ಅಪ್ರಾಪ್ತಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಘಟನೆ ಧಾರವಾಡ ತಾಲೂಕಿನ ಗ್ರಾಮವೊಂದರಲ್ಲಿ ನಿನ್ನೆ ನಡೆದಿದೆ.
ಗ್ರಾಮದ ಹುಸೇನಸಾಬ ಮರ್ದಾನಸಾಬ ಬಾಳಣ್ಣವರ ಎಂಬಾತನೇ ದೌರ್ಜನ್ಯ ಎಸಗಿದ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯು ನಿನ್ನೆ ಸಂಜೆ ಬಹಿರ್ದೆಸೆಗೆ ತೆರಳುತ್ತಿದ್ದ ೯ ವರ್ಷದ ಬಾಲಕಿಯನ್ನು ಎಳೆದುಕೊಂಡು ಹೋಗಿ ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳಲು ಯತ್ನಿಸಿದ್ದ.
ಈ ಸಂದರ್ಭದಲ್ಲಿ ಬಾಲಕಿ ಕೂಗಿಕೊಂಡಾಗ ಅಕ್ಕಪಕ್ಕದವರು ಓಡಿ ಬಂದು, ಹುಸೇನಸಾಬನನ್ನು ಥಳಿಸಿ ಯುವತಿಯನ್ನು ರಕ್ಷಿಸಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.
ಈ ಕುರಿತು ಧಾರವಾಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣದ ದಾಖಲಿಸಿಕೊಂಡು ಆರೋಪಿ ಹುಸೇನಸಾಬನನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮೀಣ ಸಿಪಿಐ ಎಸ್.ಸಿ.ಪಾಟೀಲ ಮತ್ತು ಮಹಿಳಾ ಠಾಣೆಯ ಸಿಪಿಐ ಬಸವರಾಜ ಕಾಮನಬೈಲ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.