ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ : ಎರಡನೇ ದಿನವೂ ಕಾಂಗ್ರೆಸ್ ಮುಖಂಡ ಸೇರಿ ಹಲವರ ವಿಚಾರಣೆ ನಡೆಸಿದ ಸಿಬಿಐ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣ ಕುರಿತು ಸಿಬಿಐ ಅಧಿಕಾರಿಗಳ ತನಿಖೆ ಮತ್ತಷ್ಟು ಚುರುಕುಗೊಂಡಿದೆ.

ಶಿಗ್ಗಾಂವಿಯ ಕಾಂಗ್ರೆಸ್ ಮುಖಂಡ ಶಿವಯೋಗಿ ಹಿರೇಮಠ ನನ್ನು ಎರಡನೇ ದಿನವೂ  ವಿಚಾರಣೆ ನಡೆಸಿದ ಸಿಬಿಐ ತಂಡ ಮಹತ್ವದ ಮಾಹಿತಿ ಕಲೆ ಹಾಕಿದೆ.

ಬುಧವಾರವೂ ಸಂಜೆ ವೇಳೆ ವಿಚಾರಣೆಗೆ ಆಗಮಿಸಿದ್ದ ಹಿರೇಮಠನನ್ನು ಗುರುವಾರವೂ ವಿಚಾರಣೆ ಮುಂದುವರೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಇದೇ ವೇಳೆ ಹುಬ್ಬಳ್ಳಿಯ ಮಹಿಳೆಯೊಬ್ಬರನ್ನು ಸಿಬಿಐ ಅಧಿಕಾರಿಗಳು ಒಂದು ಗಂಟೆಗೂ ಅಧಿಕ ಕಾಲ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಆದರೆ ಆ ಮಹಿಳೆ ಯಾರು, ಅವರನ್ನು ಈ ಪ್ರಕರಣದಲ್ಲಿ ಯಾಕೆ ವಿಚಾರಣೆ ನಡೆಸಲಾಗಿದೆ. ಅವರು ಯಾರೊಂದಿಗೆ ನಿಕಟ ಸಂಪರ್ಕದಲ್ಲಿದ್ದರು. ಅವರು ಸಿಬಿಐ ಎದುರು ಏನೆಲ್ಲಾ ಮಾಹಿತಿ ನೀಡಿದ್ದಾರೆ ಎಂಬುದು  ತಿಳಿದುಬಂದಿಲ್ಲ.

 ಅವರ ವಿಚಾರಣೆ ವೇಳೆ ಸಿಬಿಐ ಅಧಿಕಾರಿಗಳ ತಂಡ ಸಾಕಷ್ಟು ಮಹತ್ವದ ಮಾಹಿತಿ ಸಂಗ್ರಹಿಸಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಹಲವು ಪ್ರಭಾವಿಗಳಿಗೆ ಮತ್ತಷ್ಟುಕಂಟಕ ಎದುರಾಗಲಿದೆ ಎಂದು ಗೊತ್ತಾಗಿದೆ.   

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *