ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣ : ವಿಜಯ ಕುಲಕರ್ಣಿ ಸಿಬಿಐ ವಿಚಾರಣೆ

ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಮತಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಬಿಐ ಅಧಿಕಾರಿಗಳ ತಂಡ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿಯವರನ್ನು ವಿಚಾರಣೆಗೆ ಒಳಪಡಿಸಿದೆ.

ಬೆಳಗ್ಗೆಯಿಂದ ಸಂಜೆಯವರೆಗೂ ಬೆಂಗಳೂರಿನ ಸಿಬಿಐ ಕಚೇರಿಯಲ್ಲಿಯೇ ವಿಚಾರಣೆ ಎದುರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ವಿಜಯ ಕುಲಕರ್ಣಿಯವರ ಸಿಬಿಐ ವಿಚಾರಣೆ ಆರಂಭವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಧಾರವಾಡ ಜಿಲ್ಲೆಯ ರಾಜಕಾರಣದಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿದೆ.

ಈಗಾಗಲೇ ಹಲವರನ್ನು ತೀವ್ರ ವಿಚಾರಣೆಗೆ ಒಳಪಡಿಸಿ, ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಸಿಬಿಐ ಅಧಿಕಾರಿಗಳ ತಂಡ ಈಗ ವಿಜಯ ಕುಲಕರ್ಣಿ ಬಳಿ ಯಾವೆಲ್ಲ ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಲಿದೆ.

ಅವರ ವಿಚಾರಣೆ ಮತ್ತಾರಿಗೆ ಮುಳುವಾಗಲಿದೆ. ಇನ್ನಾರನ್ನು ಕರೆದು ಸಿಬಿಐ  ವಿಚಾರಣೆಗೆ ಒಳಪಡಿಸಲಿದೆ ಎಂಬುದು ಕಾದು ನೋಡಬೇಕಿದೆ.

ಯೋಗೀಶಗೌಡ ಗೌಡರ ಅವರನ್ನು 2016ರ ಜೂನ್ 15 ರಂದು ಧಾರವಾಡದ ಸಪ್ತಾಪುರದ ಉದಯ ಜಿಮ್ ನಲ್ಲಿ ಬೆಳ್ಳಂ ಬೆಳಗ್ಗೆ ಬರ್ಬರವಾಗಿ ಕೊಲೆ ಮಾಡಲಾಗಿತ್ತು.  

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *