ಧಾರವಾಡ prajakiran.com :
ಭಾರತ್ ಬಂದ್ ಹಿನ್ನೆಲೆ ಧಾರವಾಡ ದಲ್ಲಿ ಎಡಪಂಥೀಯ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.
ನಗರದ ಆಲೂರು ವೆಂಕಟರಾವ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ,
ಕೇಂದ್ರ ಸರಕಾರದ ವಿರುದ್ಧ ಆಕ್ರೋಶ
ವ್ಯಕ್ತಪಡಿಸಿದರು.
ಇದೆ ವೇಳೆ
ನಗರದ ಕೋರ್ಟ್ ವೃತ್ತದಲ್ಲಿ ಬಸ್, ಲಾರಿಗಳನ್ನು ತಡೆದ ಪ್ರತಿಭಟನಾಕಾರರು
ಚಾಲಕರನ್ನು ತರಾಟೆಗೆ ತೆಗೆದುಕೊಂಡರು.
ಅಲ್ಲದೆ,ಆಟೋ ಚಾಲಕರಿಗೆ ಬಂದ್ ಗೆ ಬೆಂಬಲ ನೀಡುವಂತೆ ಮನವಿ
ಮಾಡಿದರು.
ಭಾರತ ಬಂದ್ ಹಿನ್ನೆಲೆ
ಬಸ್ ಗಳ ಓಡಾಟ ಸಂಪೂರ್ಣ ಬಂದ್ ಮಾಡಲಾಗಿತ್ತು. ನಗರದ ಪ್ರಮುಖ ರಸ್ತೆಯಲ್ಲಿ
ಬಾಗಿಲು ತೆರೆಯದ ಅಂಗಡಿ-ಮುಂಗಟ್ಟುಗಳು,
ಚಕ್ಕಡಿಯೊಂದಿಗೆ ಆಗಮಿಸಿದ ಕನ್ನಡಪರ ಹೋರಾಟಗಾರರು
ನಗರದ ಆಲೂರು ವೆಂಕಟರಾವ್ ವೃತ್ತದಲ್ಲಿ
ಎತ್ತಿನ ಚಕ್ಕಡಿಯೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ
ಕೇಂದ್ರ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಬಸ್ ಸಂಚಾರ ಸ್ಥಗಿತಗೊಳಿಸುವಂತೆ
ಹೋರಾಟಗಾರರು ಅಧಿಕಾರಿಗಳಿಗೆ ಮನವಿ ಮಾಡಿದರು.
ಬಂದ್ ಗೆ ಬೆಂಬಲ ನೀಡುವಂತೆ ಕೈ ಮುಗಿದರು.
ಭಾರತ ಬಂದ್ ಗೆ ಧಾರವಾಡ ಜಿಲ್ಲೆಯ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಬೆಂಬಲ ನೀಡಿದರು.
ಜಿಲ್ಲಾಧ್ಯಕ್ಷ ಸುಧೀರ ಮುದೋಳ ನೇತೃತ್ವದಲ್ಲಿ ಆಲೂರು ವೆಂಕಟರಾಯರ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಕೇಂದ್ರದ ವಿರುದ್ಧ ಘೋಷಣೆ ಮೊಳಗಿಸಿ ಅನ್ನದಾತರ ಹೋರಾಟ ಕ್ಕೆ ಸಾಥ್ ನೀಡಿದರು.
ಕೂಡಲೇ ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ, ಕಾರ್ಮಿಕ ವಿರೋಧಿ ಕಾಯ್ದೆಯನ್ನು ವಾಪಾಸ್ ಪಡೆಯಬೇಕು ಎಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸುಧೀರ ಮುದೋಳ ಆಗ್ರಹಿಸಿದರು.