ಧಾರವಾಡ prajakiran.com : ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿ , ಸಂಸ್ಥೆ ಹಾಗೂ ವಿಶೇಷ ಶಾಲೆಗಳಲ್ಲಿ ಕರ್ತವ್ಯ ನಿರ್ವಯಿಸುತ್ತಿರುವ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಗಳನ್ನು ನೀಡಲು ಅರ್ಜಿ ಅಹ್ವಾನಿಸಿದೆ.
ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರು ಹಾಗೂ ವಿಶೇಷ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವವರು ನಿಗದಿತ ಅರ್ಜಿ ನಮೂನೆಗಳಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ.
ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ನೆಲಮಹಡಿ, ಮಿನಿವಿಧಾನಸೌಧ, ಧಾರವಾಡ ಇವರ ಕಛೇರಿಯಲ್ಲಿ ಅಥವಾ ನಿಗದಿತ ನಮೂನೆಗಳನ್ನು ಇಲಾಖೆಯ www.dwdsc.kar.nic.in ವೆಬ್ಸೈಟ್ನಲ್ಲಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ ೧೫,೨೦೨೦ ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ:೦೮೩೬-೨೭೪೪೪೭೪ ಸಂಪರ್ಕಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.