ಅಪರಾಧ

ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ಓರ್ವ ಸಾವು…!

*ಮನೆಯ ಜಾಗದ ವಿಚಾರದಲ್ಲಿ ಮಾರಾಮಾರಿ; ತಲೆಗೆ ಪೆಟ್ಟು ಬಿದ್ದು ಅಶೋಕ ಕಮ್ಮಾರ ಸಾವು*

dist hospital dharwad
dist hospital dharwad

ಧಾರವಾಡ ಪ್ರಜಾಕಿರಣ.ಕಾಮ್ : ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಓರ್ವ ಮೃತಪಟ್ಟಿದ್ದಾರೆ.

ಉಳಿದಂತೆ ಘಟನೆಯಲ್ಲಿ ಹಲವರು ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ತಲವಾಯಿ ಗ್ರಾಮದಲ್ಲಿ ನಡೆದಿದೆ.

ಅಣ್ಣ ತಮ್ಮಂದಿರಾದ ಫಕ್ಕೀರಪ್ಪ ಕಮ್ಮಾರ ಹಾಗೂ ಅಶೋಕ ಕಮ್ಮಾರ ಎಂಬುವವರ ಮಧ್ಯೆ ಈ ಮಾರಾಮಾರಿ ನಡೆದಿದೆ.

ನಂತರ ಎರಡು ಕುಟುಂಬಗಳ ಸದಸ್ಯರು ಕೈಕೈ ಮಿಲಾಯಿಸುವ ಮೂಲಕ ಮನೆಯ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾರಾಮಾರಿ ನಡೆದಿದೆ.

ಕಲ್ಲು, ಬಡಿಗೆಗಳಿಂದ ಈ ಎರಡೂ ಕುಟುಂಬದ ಸದಸ್ಯರು ಬಡಿದಾಡಿಕೊಂಡಿದ್ದು, ಅಶೋಕ ಕಮ್ಮಾರ (45) ಹಾಗೂ ಫಕ್ಕೀರಪ್ಪ ಕಮ್ಮಾರ (50) ಎಂಬುವವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ಅಶೋಕ ಎಂಬುವವರನ್ನು ಕಿಮ್ಸ್‌ಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಶೋಕ ಅವರು ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಫಕ್ಕೀರಪ್ಪನನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *