ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕೋವಿಡ್ -೨೦೧೯ ಕೊರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ನಿಷೇಧಾಜ್ಞೆ ಹೊರಡಿಸಿದ್ದಾರೆ.
ಸಿ.ಆರ್.ಪಿ.ಸಿ ೧೯೭೩ ರ ಕಲಂ ೧೪೪ ರ ಮೇರೆಗೆ, ದಿ : ೧೫-೦೭-೨೦೨೦ ರಂದು ಬೆ : ೧೦-೦೦ ಗಂಟೆಯಿAದ ದಿನಾಂಕ : ೨೪-೭-೨೦೨೦ ರಾ : ೦೮-೦೦ ಗಂಟೆಯವರೆಗೆ ಧಾರವಾಡ ಜಿಲ್ಲೆಯಾದ್ಯಂತ ಸಂತೆ , ಜಾತ್ರೆ , ಮೆರವಣಿಗೆ ಸಮಾವೇಶ , ಸಮ್ಮೇಳನ , ಕ್ರೀಡಾ ಕೂಟ , ಮದುವೆ , ಮುಂಜಿ ಹಾಗೂ ಇತರ ಯಾವುದೇ ಧಾರ್ಮಿಕ ಸಮಾರಂಭಗಳನ್ನು ಪ್ರತಿಬಂಧಿಸಿದ್ದಾರೆ.
ಧಾರವಾಡ ಜಿಲ್ಲೆಯಾದ್ಯಂತ ಐದಕ್ಕೂ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಸಂತೆ, ಜಾತ್ರೆ ಅಥವಾ ಸಮಾವೇಶ, ಮದುವೆ, ಮುಂಜಿ ಹಾಗೂ ಇತರ ಯಾವುದೇ ಸಮಾರಂಭಗಳನ್ನು ಜರುಗಿಸುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.
ಜಿಲ್ಲೆಯಾದ್ಯಂತ ಯಾವುದೇ ಧಾರ್ಮಿಕ ಉತ್ಸವ, ಉರುಸು, ಪ್ರಾರ್ಥನೆ, ಜಾತ್ರೆ, ಮೆರವಣಿಗೆ, ಮುಂತಾದವುಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ.
ಯಾವುದೇ ಕ್ರೀಡಾ ಕೂಟ, ಪ್ರವಾಸ ಸ್ನೇಹ ಸಮ್ಮೇಳನ, ಸಂಗೀತ ಸಮ್ಮೇಳನ, ನಾಟಕೋತ್ಸವ, ವಿಚಾರ ಗೋಷ್ಠಿ, ಸಾರ್ವಜನಿಕ ಸಭೆ, ಸಮಾರಂಭಗಳು ಮುಂತಾದವುಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ಎಲ್ಲಾ ಧರ್ಮಗಳ ಪ್ರಾರ್ಥನಾ ಒಗ್ಗೂಡುವಿಕೆ ಮತ್ತು ಹಬ್ಬಗಳ ಒಗ್ಗೂಡುವಿಕೆಯನ್ನು ನಿಷೇಧಿಸಿದೆ.
ದಿ: ೧೪-೦೭-೨೦೨೦ ಮಧ್ಯರಾತ್ರಿ ೧೨ ಗಂಟೆಯಿಂದ ದಿ: ೨೪-೦೭-೨೦೨೦ರ ಮಧ್ಯರಾತ್ರಿ ೧೨-೦೦ ಗಂಟೆಯವರೆಗೆ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಮದ್ಯಪಾನ ಮತ್ತು ಮದ್ಯ ಮಾರಾಟವನ್ನು ಹಾಗೂ ಮದ್ಯ ಸಾಗಾಣಿಕೆ ನಿಷೇಧಿಸಿದೆ.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ೧೮೬೦ ಕಲಂ ೧೮೮ ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.