ಬೆಂಗಳೂರು prajakiran.com : ದೇಶದಲ್ಲಿ ಕಳೆದ 1 ತಿಂಗಳಲ್ಲಿ ಸತತ 20 ಬಾರಿ ಇಂಧನ ದರ ಏರಿಕೆಯಾಗಿದ್ದು, ಕರ್ನಾಟಕ ಸೇರಿ 7 ರಾಜ್ಯಗಳಲ್ಲಿ ಪೆಟ್ರೋಲ್ ದರ ಶತಕದ ಗಡಿ ದಾಟಿದೆ.
ಈ ಕುರಿತು ಟೀಕಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ತಗ್ಗಿಸುವುದೇ ಬಿಜೆಪಿ ಸರ್ಕಾರ ಜನರಿಗೆ ಕೊಡುವ ಅತಿದೊಡ್ಡ ಪ್ಯಾಕೇಜ್ ಆಗಲಿದೆ ಎಂದಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮವಾದ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ತಗ್ಗಿಸುವುದು.
ನಿರುದ್ಯೋಗ ಹೆಚ್ಚುತ್ತಿರುವ ಸಂದರ್ಭದಲ್ಲಿ ಇಂಧನ ತೆರಿಗೆಯ ಭಾರದಿಂದಾಗಿ ಮಧ್ಯಮ ವರ್ಗದ ಜನರು ತಮ್ಮ ಮಕ್ಕಳ ಯೋಗಕ್ಷೇಮವನ್ನೂ ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.